ಬಿಜೆಪಿಯ ಅಯೋಧ್ಯೆ ಕಾರ್ಯಸೂಚಿಯನ್ನು ಶಿವಸೇನಾ ಅಪಹರಿಸುತ್ತಿದೆ ಎಂದು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಮತ್ತು ಬಲಿಯಾ ಶಾಸಕ ಸುರೇಂದ್ರ ಸಿಂಗ್ ಭಾನುವಾರವಷ್ಟೇ ಆರೋಪಿಸಿದ್ದರು. ಉಮಾ ಅವರು ತಮ್ಮ ಪಕ್ಷದ ಮುಖಂಡರಿಗಿಂತ ಭಿನ್ನವಾದ ನಿಲುವು ತಾಳಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲ ನೀಡುವಂತೆ ಅವರು ಎಸ್ಪಿ, ಬಿಎಸ್ಪಿ, ಅಕಾಲಿ ದಳ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರನ್ನು ಕೋರಿದ್ದಾರೆ.