<p><strong>ನವದೆಹಲಿ</strong>: ಕೊರೊನಾವೈರಸ್ನಿಂದ ದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವೇ ಹೊಣೆ ಎಂದು ಕಾಂಗ್ರೆಸ್ನ ಹಿರಿಯ ನೇತಾರ ಕಮಲ್ನಾಥ್ ಆರೋಪಿಸಿದ್ದಾರೆ.</p>.<p>ಮಧ್ಯಪ್ರದೇಶದ ವಿಧಾನಸಭೆ ಕಾರ್ಯವೆಸಗಲಿ ಮತ್ತು ಅಲ್ಲಿದ್ದ ಕಾಂಗ್ರೆಸ್ ಸರ್ಕಾರ ಪತನವಾಗಲಿ ಎಂಬ ಏಕೈಕ ಉದ್ದೇಶದಿಂದ ಸಂಸತ್ ಕಲಾಪ ನಡೆದಿತ್ತು ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಮಲ್ನಾಥ್ ಹೇಳಿದ್ದಾರೆ.</p>.<p>ಮಧ್ಯಪ್ರದೇಶದ ಜನರನ್ನುಬಿಜೆಪಿಮೂರ್ಖರನ್ನಾಗಿ ಮಾಡಿದ್ದು, ಕೊರೊನಾವೈರಸ್ ವ್ಯಾಪಕವಾಗಿ ಹರಡುತ್ತಿದ್ದರೂ ಅಲ್ಲಿ ಆರೋಗ್ಯ ಸಚಿವರಾಗಲೀ, ಗೃಹ ಸಚಿವರಾಗಲೀ ಇಲ್ಲ. ಜಗತ್ತಿನಲ್ಲಿ ಎಲ್ಲಿಯೂ ಈ ರೀತಿ ಆಗಿರಲಿಕ್ಕಿಲ್ಲ</p>.<p>ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೋಗದ ಪರೀಕ್ಷೆ ನಡೆಸಬೇಕಿದೆ. ಕೋವಿಡ್-19ನಿಂದಾಗಿ ದೇಶ ಆರ್ಥಿಕ ಕುಸಿತ ಅನುಭವಿಸಲಿದ್ದು, ಕೇಂದ್ರದ ಆರ್ಥಿಕ ಪ್ಯಾಕೇಜ್ಗಳತ್ತ ಹೆಚ್ಚಿನ ಗಮನ ಹರಿಸಬೇಕಿದೆ. ಯಾವ ಕ್ಷೇತ್ರಕ್ಕೆ ಗಮನ ಹರಿಸಲಾಗುತ್ತದೆ ಮತ್ತು ಅದರ ಅನುಷ್ಠಾನ ಹೇಗೆ ಆಗುತ್ತದೆ ಎಂಬುದರ ಮೇಲೆ ಯಶಸ್ಸು ಅವಲಂಬಿತವಾಗಿದೆ ಎಂದಿದ್ದಾರೆ ಕಮಲ್ನಾಥ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೊರೊನಾವೈರಸ್ನಿಂದ ದೇಶದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವೇ ಹೊಣೆ ಎಂದು ಕಾಂಗ್ರೆಸ್ನ ಹಿರಿಯ ನೇತಾರ ಕಮಲ್ನಾಥ್ ಆರೋಪಿಸಿದ್ದಾರೆ.</p>.<p>ಮಧ್ಯಪ್ರದೇಶದ ವಿಧಾನಸಭೆ ಕಾರ್ಯವೆಸಗಲಿ ಮತ್ತು ಅಲ್ಲಿದ್ದ ಕಾಂಗ್ರೆಸ್ ಸರ್ಕಾರ ಪತನವಾಗಲಿ ಎಂಬ ಏಕೈಕ ಉದ್ದೇಶದಿಂದ ಸಂಸತ್ ಕಲಾಪ ನಡೆದಿತ್ತು ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಮಲ್ನಾಥ್ ಹೇಳಿದ್ದಾರೆ.</p>.<p>ಮಧ್ಯಪ್ರದೇಶದ ಜನರನ್ನುಬಿಜೆಪಿಮೂರ್ಖರನ್ನಾಗಿ ಮಾಡಿದ್ದು, ಕೊರೊನಾವೈರಸ್ ವ್ಯಾಪಕವಾಗಿ ಹರಡುತ್ತಿದ್ದರೂ ಅಲ್ಲಿ ಆರೋಗ್ಯ ಸಚಿವರಾಗಲೀ, ಗೃಹ ಸಚಿವರಾಗಲೀ ಇಲ್ಲ. ಜಗತ್ತಿನಲ್ಲಿ ಎಲ್ಲಿಯೂ ಈ ರೀತಿ ಆಗಿರಲಿಕ್ಕಿಲ್ಲ</p>.<p>ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೋಗದ ಪರೀಕ್ಷೆ ನಡೆಸಬೇಕಿದೆ. ಕೋವಿಡ್-19ನಿಂದಾಗಿ ದೇಶ ಆರ್ಥಿಕ ಕುಸಿತ ಅನುಭವಿಸಲಿದ್ದು, ಕೇಂದ್ರದ ಆರ್ಥಿಕ ಪ್ಯಾಕೇಜ್ಗಳತ್ತ ಹೆಚ್ಚಿನ ಗಮನ ಹರಿಸಬೇಕಿದೆ. ಯಾವ ಕ್ಷೇತ್ರಕ್ಕೆ ಗಮನ ಹರಿಸಲಾಗುತ್ತದೆ ಮತ್ತು ಅದರ ಅನುಷ್ಠಾನ ಹೇಗೆ ಆಗುತ್ತದೆ ಎಂಬುದರ ಮೇಲೆ ಯಶಸ್ಸು ಅವಲಂಬಿತವಾಗಿದೆ ಎಂದಿದ್ದಾರೆ ಕಮಲ್ನಾಥ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>