<p class="title"><strong>ನವದೆಹಲಿ:</strong>ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಬೆಳವಣಿಗೆಗಳು ಗೊತ್ತಾಗುತ್ತಿದ್ದಂತೆ ಬಿಜೆಪಿಯ ಕೇಂದ್ರ ಕಚೇರಿ ಬಿಕೋ ಎನ್ನುತ್ತಿತ್ತು. ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ವಿಜಯೋತ್ಸವ, ಹರ್ಷೋದ್ಘಾರಗಳು ಮುಗಿಲು ಮುಟ್ಟಿದವು.</p>.<p class="title">ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಬರಬಹುದು ಎಂದು ಊಹಿಸಿಕೊಂಡು ದೀನ್ ದಯಾಳ್ ಮಾರ್ಗದಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಹತ್ತಿರ ಬಿಗಿ ಬಂದೋಬಸ್ತ್ ಮಾಡಿದ್ದಪೊಲೀಸರು, ಅಲ್ಲಲ್ಲಿ ಬ್ಯಾರಿಕೇಡ್ ಸಹ ಹಾಕಿದ್ದರು. ಆದರೆ, ಫಲಿತಾಂಶದ ಬೆಳವಣಿಗೆಗಳು ಪ್ರಕಟವಾಗುತ್ತಿದ್ದಂತೆ ಕಚೇರಿಯತ್ತ ಯಾರೂ ಸುಳಿಯಲಿಲ್ಲ.</p>.<p class="title">ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಪರಸ್ಪರ ಗುಲಾಲು ಹಚ್ಚಿಕೊಂಡು ಕುಣಿದು ಕುಪ್ಪಳಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.</p>.<p>‘ಭಾರತದ ಮುಂದಿನ ಪ್ರಧಾನಿ ರಾಹುಲ್’ ಎಂದು ಬರೆದ ಬ್ಯಾನರ್ ಕಟ್ಟಿ,ಕಾಂಗ್ರೆಸ್ ಧ್ವಜ ಹಿಡಿದು ಘೋಷಣೆ ಕೂಗಿದರು.</p>.<p>ಪಂಜಾಬ್ ರಾಜ್ಯದ ಸಚಿವ ನವಜೋತ್ ಸಿಂಗ್ ಸಿಧು, ಪ್ರಿಯಾಂಕಾ ಚತುರ್ವೇದಿ ಸೇರಿದಂತೆ ಹಿರಿಯ ನಾಯಕರು ವಿಜಯೋತ್ಸವದಲ್ಲಿ ಭಾಗವಹಿಸಿದ್ದರು.</p>.<p>‘ಎಲ್ಲರೂ ಒಗ್ಗಟ್ಟಿನಿಂದ ಮಾಡಿದ ಶ್ರಮಕ್ಕೆ ಸಿಕ್ಕ ಫಲ ಇದಾಗಿದೆ. ರಾಹುಲ್ ಅವರು ಬಿಕ್ಕಟ್ಟಿನ ಸಮಯದಲ್ಲಿ ದೊಡ್ಡ ಪಾತ್ರವನ್ನು ಪ್ರದರ್ಶಿಸಿದ್ದಾರೆ. ಕಾರ್ಯಕರ್ತರಿಗೆ ಅವರು ಸ್ಫೂರ್ತಿಯಾಗಿದ್ದಾರೆ’ ಎಂದು ಸಿಧು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong>ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಬೆಳವಣಿಗೆಗಳು ಗೊತ್ತಾಗುತ್ತಿದ್ದಂತೆ ಬಿಜೆಪಿಯ ಕೇಂದ್ರ ಕಚೇರಿ ಬಿಕೋ ಎನ್ನುತ್ತಿತ್ತು. ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ವಿಜಯೋತ್ಸವ, ಹರ್ಷೋದ್ಘಾರಗಳು ಮುಗಿಲು ಮುಟ್ಟಿದವು.</p>.<p class="title">ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಬರಬಹುದು ಎಂದು ಊಹಿಸಿಕೊಂಡು ದೀನ್ ದಯಾಳ್ ಮಾರ್ಗದಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಹತ್ತಿರ ಬಿಗಿ ಬಂದೋಬಸ್ತ್ ಮಾಡಿದ್ದಪೊಲೀಸರು, ಅಲ್ಲಲ್ಲಿ ಬ್ಯಾರಿಕೇಡ್ ಸಹ ಹಾಕಿದ್ದರು. ಆದರೆ, ಫಲಿತಾಂಶದ ಬೆಳವಣಿಗೆಗಳು ಪ್ರಕಟವಾಗುತ್ತಿದ್ದಂತೆ ಕಚೇರಿಯತ್ತ ಯಾರೂ ಸುಳಿಯಲಿಲ್ಲ.</p>.<p class="title">ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಪರಸ್ಪರ ಗುಲಾಲು ಹಚ್ಚಿಕೊಂಡು ಕುಣಿದು ಕುಪ್ಪಳಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.</p>.<p>‘ಭಾರತದ ಮುಂದಿನ ಪ್ರಧಾನಿ ರಾಹುಲ್’ ಎಂದು ಬರೆದ ಬ್ಯಾನರ್ ಕಟ್ಟಿ,ಕಾಂಗ್ರೆಸ್ ಧ್ವಜ ಹಿಡಿದು ಘೋಷಣೆ ಕೂಗಿದರು.</p>.<p>ಪಂಜಾಬ್ ರಾಜ್ಯದ ಸಚಿವ ನವಜೋತ್ ಸಿಂಗ್ ಸಿಧು, ಪ್ರಿಯಾಂಕಾ ಚತುರ್ವೇದಿ ಸೇರಿದಂತೆ ಹಿರಿಯ ನಾಯಕರು ವಿಜಯೋತ್ಸವದಲ್ಲಿ ಭಾಗವಹಿಸಿದ್ದರು.</p>.<p>‘ಎಲ್ಲರೂ ಒಗ್ಗಟ್ಟಿನಿಂದ ಮಾಡಿದ ಶ್ರಮಕ್ಕೆ ಸಿಕ್ಕ ಫಲ ಇದಾಗಿದೆ. ರಾಹುಲ್ ಅವರು ಬಿಕ್ಕಟ್ಟಿನ ಸಮಯದಲ್ಲಿ ದೊಡ್ಡ ಪಾತ್ರವನ್ನು ಪ್ರದರ್ಶಿಸಿದ್ದಾರೆ. ಕಾರ್ಯಕರ್ತರಿಗೆ ಅವರು ಸ್ಫೂರ್ತಿಯಾಗಿದ್ದಾರೆ’ ಎಂದು ಸಿಧು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>