ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಬರಬಹುದು ಎಂದು ಊಹಿಸಿಕೊಂಡು ದೀನ್ ದಯಾಳ್ ಮಾರ್ಗದಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಹತ್ತಿರ ಬಿಗಿ ಬಂದೋಬಸ್ತ್ ಮಾಡಿದ್ದಪೊಲೀಸರು, ಅಲ್ಲಲ್ಲಿ ಬ್ಯಾರಿಕೇಡ್ ಸಹ ಹಾಕಿದ್ದರು. ಆದರೆ, ಫಲಿತಾಂಶದ ಬೆಳವಣಿಗೆಗಳು ಪ್ರಕಟವಾಗುತ್ತಿದ್ದಂತೆ ಕಚೇರಿಯತ್ತ ಯಾರೂ ಸುಳಿಯಲಿಲ್ಲ.