<p><strong>ನವದೆಹಲಿ</strong>: ಬಿಜೆಪಿಯ ಸಂಸದೀಯ ಪಕ್ಷದ ಕಾರ್ಯಕಾರಿ ಸಮಿತಿಯನ್ನು ಬುಧವಾರ ರಚಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ನಾಯಕರಾಗಿದ್ದಾರೆ.</p>.<p>ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪನಾಯಕರಾಗಿದ್ದಾರೆ.</p>.<p>ರಾಜ್ಯಸಭೆಯಲ್ಲಿ ತಾವರ್ಚಂದ್ ಗೆಹ್ಲೋಟ್ ಅವರನ್ನು ನಾಯಕರನ್ನಾಗಿ ಹಾಗೂ ಪೀಯೂಷ್ ಗೋಯಲ್ ಅವರನ್ನು ಉಪ ನಾಯಕರನ್ನಾಗಿ ನೇಮಿಸಲಾಗಿದೆ.</p>.<p>ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಅರುಣ್ ಜೇಟ್ಲಿ ಅವರು ನಿರ್ವಹಿಸಿದ್ದ ಈ ಹುದ್ದೆಯನ್ನು ಈಗ ಗೆಹ್ಲೋಟ್ ನಿಭಾಯಿಸಲಿದ್ದಾರೆ.</p>.<p>ಮೋದಿ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರಾಗಿರುವ ಗೆಹ್ಲೋಟ್ ಅವರು ಅನುಭವಿ ಸಂಸದೀಯ ಪಟು ಹಾಗೂ ದಲಿತ ಮುಖಂಡರಾಗಿದ್ದಾರೆ.</p>.<p>ಸಚಿವೆ ಸ್ಮೃತಿ ಇರಾನಿ ಅವರನ್ನು ಕಾರ್ಯಕಾರಿ ಸಮಿತಿಗೆ ವಿಶೇಷ ಆಹ್ವಾನಿತರನ್ನಾಗಿ ನೇಮಿಸಲಾಗಿದೆ. ಈ ಮೂಲಕ ಇರಾನಿ ಅವರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ.</p>.<p>ಲೋಕಸಭೆಯಿಂದ ನಿತಿನ್ ಗಡ್ಕರಿ, ರವಿ ಶಂಕರ್ ಪ್ರಸಾದ್, ಅರ್ಜುನ್ ಮುಂಡಾ, ನರೇಂದ್ರ ಸಿಂಗ್ ತೋಮರ್, ಜುವಲ್ ಒರಮ್ ಹಾಗೂ ರಾಜ್ಯಸಭೆಯಿಂದ ಜೆ.ಪಿ. ನಡ್ಡಾ, ಓಂ ಪ್ರಕಾಶ್ ಮಾಥೂರ್, ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್ ಮತ್ತು ಪ್ರಕಾಶ್ ಜಾವಡೇಕರ್ ಇತರ ವಿಶೇಷ ಆಹ್ವಾನಿತರಾಗಿದ್ದಾರೆ.</p>.<p>ಮುಖ್ಯ ಸಚೇತಕ: ಸಂಜಯ್ ಜೈಸ್ವಾಲ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ.</p>.<p>ಇದೇ ಪ್ರಥಮ ಬಾರಿ ಮಹಿಳಾ ಸಂಸದೆಯರಿಗಾಗಿಯೇ ಮೂವರು ಮಹಿಳಾ ಸಂಸದೆಯರನ್ನು ಸಚೇತರನ್ನಾಗಿ ನೇಮಿಸಲಾಗಿದೆ. ಇವರ ಜತೆಗೆ ಲೋಕಸಭೆಯಲ್ಲಿ ವಿವಿಧ ರಾಜ್ಯಗಳ ಇತರ 15 ಮಂದಿಯನ್ನು ಸಚೇತಕರನ್ನಾಗಿ ನೇಮಿಸಲಾಗಿದೆ.</p>.<p>ರಾಜ್ಯಸಭೆಯಲ್ಲಿ ಆರು ಮಂದಿಯನ್ನು ಸಚೇತಕರನ್ನಾಗಿ ನೇಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಿಜೆಪಿಯ ಸಂಸದೀಯ ಪಕ್ಷದ ಕಾರ್ಯಕಾರಿ ಸಮಿತಿಯನ್ನು ಬುಧವಾರ ರಚಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ನಾಯಕರಾಗಿದ್ದಾರೆ.</p>.<p>ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪನಾಯಕರಾಗಿದ್ದಾರೆ.</p>.<p>ರಾಜ್ಯಸಭೆಯಲ್ಲಿ ತಾವರ್ಚಂದ್ ಗೆಹ್ಲೋಟ್ ಅವರನ್ನು ನಾಯಕರನ್ನಾಗಿ ಹಾಗೂ ಪೀಯೂಷ್ ಗೋಯಲ್ ಅವರನ್ನು ಉಪ ನಾಯಕರನ್ನಾಗಿ ನೇಮಿಸಲಾಗಿದೆ.</p>.<p>ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಅರುಣ್ ಜೇಟ್ಲಿ ಅವರು ನಿರ್ವಹಿಸಿದ್ದ ಈ ಹುದ್ದೆಯನ್ನು ಈಗ ಗೆಹ್ಲೋಟ್ ನಿಭಾಯಿಸಲಿದ್ದಾರೆ.</p>.<p>ಮೋದಿ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರಾಗಿರುವ ಗೆಹ್ಲೋಟ್ ಅವರು ಅನುಭವಿ ಸಂಸದೀಯ ಪಟು ಹಾಗೂ ದಲಿತ ಮುಖಂಡರಾಗಿದ್ದಾರೆ.</p>.<p>ಸಚಿವೆ ಸ್ಮೃತಿ ಇರಾನಿ ಅವರನ್ನು ಕಾರ್ಯಕಾರಿ ಸಮಿತಿಗೆ ವಿಶೇಷ ಆಹ್ವಾನಿತರನ್ನಾಗಿ ನೇಮಿಸಲಾಗಿದೆ. ಈ ಮೂಲಕ ಇರಾನಿ ಅವರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ.</p>.<p>ಲೋಕಸಭೆಯಿಂದ ನಿತಿನ್ ಗಡ್ಕರಿ, ರವಿ ಶಂಕರ್ ಪ್ರಸಾದ್, ಅರ್ಜುನ್ ಮುಂಡಾ, ನರೇಂದ್ರ ಸಿಂಗ್ ತೋಮರ್, ಜುವಲ್ ಒರಮ್ ಹಾಗೂ ರಾಜ್ಯಸಭೆಯಿಂದ ಜೆ.ಪಿ. ನಡ್ಡಾ, ಓಂ ಪ್ರಕಾಶ್ ಮಾಥೂರ್, ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್ ಮತ್ತು ಪ್ರಕಾಶ್ ಜಾವಡೇಕರ್ ಇತರ ವಿಶೇಷ ಆಹ್ವಾನಿತರಾಗಿದ್ದಾರೆ.</p>.<p>ಮುಖ್ಯ ಸಚೇತಕ: ಸಂಜಯ್ ಜೈಸ್ವಾಲ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ.</p>.<p>ಇದೇ ಪ್ರಥಮ ಬಾರಿ ಮಹಿಳಾ ಸಂಸದೆಯರಿಗಾಗಿಯೇ ಮೂವರು ಮಹಿಳಾ ಸಂಸದೆಯರನ್ನು ಸಚೇತರನ್ನಾಗಿ ನೇಮಿಸಲಾಗಿದೆ. ಇವರ ಜತೆಗೆ ಲೋಕಸಭೆಯಲ್ಲಿ ವಿವಿಧ ರಾಜ್ಯಗಳ ಇತರ 15 ಮಂದಿಯನ್ನು ಸಚೇತಕರನ್ನಾಗಿ ನೇಮಿಸಲಾಗಿದೆ.</p>.<p>ರಾಜ್ಯಸಭೆಯಲ್ಲಿ ಆರು ಮಂದಿಯನ್ನು ಸಚೇತಕರನ್ನಾಗಿ ನೇಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>