<p><strong>ನವದೆಹಲಿ: </strong>ಈಶಾನ್ಯ ದೆಹಲಿಯಲ್ಲಿ 46 ಜನರ ಸಾವಿಗೆ ಕಾರಣವಾದ <strong><a href="https://www.prajavani.net/tags/delhi-violence" target="_blank">ಹಿಂಸಾಚಾರ</a></strong>ದ ಹಿಂದೆ ಬಿಜೆಪಿ ನಾಯಕರ ಮತ್ತು ಪೊಲೀಸರ ಕೈವಾಡವಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಹಿಂಸಾಚಾರದ ಬಗ್ಗೆ ಸಂಸದೀಯ ಸಮಿತಿ ಮತ್ತು ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದು ಆಗ್ರಹಿಸಿದೆ.</p>.<p>ಹಿಂಸಾಚಾರಕ್ಕೆ ಸಂಬಂಧಿಸಿ ಬಿಜೆಪಿ ನಾಯಕರನ್ನು ಮತ್ತು ಪೊಲೀಸರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಎಎಪಿ ವಕ್ತಾರ, ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಆಗ್ರಹಿಸಿದ್ದಾರೆ.</p>.<p>‘ಬಿಜೆಪಿಯ ವ್ಯವಸ್ಥಿತ ಪಿತೂರಿಂದ ದೆಹಲಿ ಹಿಂಸಾಚಾರ ನಡೆದಿದೆ. ಇದರಲ್ಲಿ ಬಿಜೆಪಿ ನಾಯಕರು ಮತ್ತು ಪೊಲೀಸರು ಶಾಮೀಲಾಗಿದ್ದು, ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಇದನ್ನು ನೇರ ಪ್ರಸಾರ ಮಾಡಬೇಕು. ಇದರಿಂದ ಇಡೀ ದೇಶಕ್ಕೆ ಸತ್ಯ ಏನೆಂದು ಗೊತ್ತಾಗಲಿದೆ’ ಎಂದು ಸಿಂಗ್ ಹೇಳಿದ್ದಾರೆ.</p>.<p>ದೆಹಲಿಯಲ್ಲಿ ಗಲಭೆಗೆ ಪ್ರಚೋದನೆ ನೀಡಲು ಹೊರಗಿನವರನ್ನು ಕರೆಸಲಾಗಿತ್ತು. ಇದರಿಂದ, ಬಿಜೆಪಿ ಕುಮ್ಮಕ್ಕಿನಿಂದಲೇ ಗಲಭೆಗಳು ನಡೆದಿವೆ ಎಂಬುದು ದೃಢಪಟ್ಟಿದೆ ಎಂದೂ ಅವರು ಹೇಳಿದ್ದಾರೆ.</p>.<p>ಈ ಮಧ್ಯೆ, ಕಳೆದೊಂದು ವಾರದಿಂದ ಗಲಭೆಗಳಿಂದ ನಲುಗಿದ್ದ ದೆಹಲಿಯಲ್ಲಿ ಪರಿಸ್ಥಿತಿ ತಿಳಿಯಾಗುತ್ತಿದೆ. ಆಗ್ನೇಯ ಮತ್ತು ಪಶ್ಚಿಮ ದೆಹಲಿಯಲ್ಲಿ ಸುಳ್ಳು ವದಂತಿಗಳನ್ನು ಹಬ್ಬಿಸಿ ಜನರ ಆತಂಕಕ್ಕೆ ಕಾರಣವಾಗಿದ್ದ ಇಬ್ಬರನ್ನು ಬಂಧಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/two-men-held-in-delhi-for-rumour-mongering-709387.html" itemprop="url" target="_blank">ದೆಹಲಿಯಲ್ಲಿ ಸುಳ್ಳು ವದಂತಿ ಹರಡಿದ ಹಿನ್ನೆಲೆ: ಇಬ್ಬರನ್ನು ಬಂಧಿಸಿದ ಪೊಲೀಸರು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಈಶಾನ್ಯ ದೆಹಲಿಯಲ್ಲಿ 46 ಜನರ ಸಾವಿಗೆ ಕಾರಣವಾದ <strong><a href="https://www.prajavani.net/tags/delhi-violence" target="_blank">ಹಿಂಸಾಚಾರ</a></strong>ದ ಹಿಂದೆ ಬಿಜೆಪಿ ನಾಯಕರ ಮತ್ತು ಪೊಲೀಸರ ಕೈವಾಡವಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಹಿಂಸಾಚಾರದ ಬಗ್ಗೆ ಸಂಸದೀಯ ಸಮಿತಿ ಮತ್ತು ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದು ಆಗ್ರಹಿಸಿದೆ.</p>.<p>ಹಿಂಸಾಚಾರಕ್ಕೆ ಸಂಬಂಧಿಸಿ ಬಿಜೆಪಿ ನಾಯಕರನ್ನು ಮತ್ತು ಪೊಲೀಸರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಎಎಪಿ ವಕ್ತಾರ, ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಆಗ್ರಹಿಸಿದ್ದಾರೆ.</p>.<p>‘ಬಿಜೆಪಿಯ ವ್ಯವಸ್ಥಿತ ಪಿತೂರಿಂದ ದೆಹಲಿ ಹಿಂಸಾಚಾರ ನಡೆದಿದೆ. ಇದರಲ್ಲಿ ಬಿಜೆಪಿ ನಾಯಕರು ಮತ್ತು ಪೊಲೀಸರು ಶಾಮೀಲಾಗಿದ್ದು, ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಇದನ್ನು ನೇರ ಪ್ರಸಾರ ಮಾಡಬೇಕು. ಇದರಿಂದ ಇಡೀ ದೇಶಕ್ಕೆ ಸತ್ಯ ಏನೆಂದು ಗೊತ್ತಾಗಲಿದೆ’ ಎಂದು ಸಿಂಗ್ ಹೇಳಿದ್ದಾರೆ.</p>.<p>ದೆಹಲಿಯಲ್ಲಿ ಗಲಭೆಗೆ ಪ್ರಚೋದನೆ ನೀಡಲು ಹೊರಗಿನವರನ್ನು ಕರೆಸಲಾಗಿತ್ತು. ಇದರಿಂದ, ಬಿಜೆಪಿ ಕುಮ್ಮಕ್ಕಿನಿಂದಲೇ ಗಲಭೆಗಳು ನಡೆದಿವೆ ಎಂಬುದು ದೃಢಪಟ್ಟಿದೆ ಎಂದೂ ಅವರು ಹೇಳಿದ್ದಾರೆ.</p>.<p>ಈ ಮಧ್ಯೆ, ಕಳೆದೊಂದು ವಾರದಿಂದ ಗಲಭೆಗಳಿಂದ ನಲುಗಿದ್ದ ದೆಹಲಿಯಲ್ಲಿ ಪರಿಸ್ಥಿತಿ ತಿಳಿಯಾಗುತ್ತಿದೆ. ಆಗ್ನೇಯ ಮತ್ತು ಪಶ್ಚಿಮ ದೆಹಲಿಯಲ್ಲಿ ಸುಳ್ಳು ವದಂತಿಗಳನ್ನು ಹಬ್ಬಿಸಿ ಜನರ ಆತಂಕಕ್ಕೆ ಕಾರಣವಾಗಿದ್ದ ಇಬ್ಬರನ್ನು ಬಂಧಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/two-men-held-in-delhi-for-rumour-mongering-709387.html" itemprop="url" target="_blank">ದೆಹಲಿಯಲ್ಲಿ ಸುಳ್ಳು ವದಂತಿ ಹರಡಿದ ಹಿನ್ನೆಲೆ: ಇಬ್ಬರನ್ನು ಬಂಧಿಸಿದ ಪೊಲೀಸರು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>