ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ, ಶಿವಸೇನಾ-ಎನ್ಸಿಪಿ-ಕಾಂಗ್ರೆಸ್ ನಡುವಿನ ಮೈತ್ರಿಯು ಆರು ತಿಂಗಳಿಗೂ ಹೆಚ್ಚುಕಾಲ ಉಳಿಯುವುದಿಲ್ಲ ಎಂದಿರುವ ಮಹಾರಾಷ್ಟ್ರ ಉಸ್ತುವಾರಿ ಸಿಎಂ ದೇವೇಂದ್ರ ಫಡಣವೀಸ್ ಅವರ ವಿರುದ್ಧವೂ ಕಿಡಿಕಾರಿರುವ ಸೇನಾ, ಹೊಸ ರಾಜಕೀಯ ಸಮೀಕರಣವು "ಹಲವಾರು ಜನರಿಗೆ ಹೊಟ್ಟೆ ನೋವು" ತರಿಸಿದೆ ಎಂದು ಹೇಳಿದೆ.