<p><strong>ಮುಂಬೈ:</strong> ನವ ರಾಷ್ಟ್ರೀಯವಾದದ ರಾಜಕಾರಣಕ್ಕೆ ‘ಗುರಾಣಿ’ಯಾಗಿ ಹಿಂದುತ್ವ ಸಿದ್ಧಾಂತವಾದಿ ಸಾವರ್ಕರ್ ಅವರನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಶಿವಸೇನಾ ಆರೋಪಿಸಿದೆ.</p>.<p>ಸಾವರ್ಕರ್ ಬಗ್ಗೆ ಬಿಜೆಪಿಗೆ ಇರುವುದು ‘ನಕಲಿ’ ಪ್ರೀತಿ. ಕೇಂದ್ರವು ಸಾವರ್ಕರ್ಗೆ ಏಕೆ ಗೌರವಕೊಟ್ಟಿಲ್ಲ ಎಂಬ ಬಗ್ಗೆ ಬಿಜೆಪಿ ಮುಖಂಡರು ಪ್ರಶ್ನಿಸಬೇಕೇ ಹೊರತು ಮಹಾರಾಷ್ಟ್ರ ಸರ್ಕಾರವನ್ನು ಗುರಿ ಮಾಡಿಕೊಳ್ಳಬಾರದು ಎಂದು ಶಿವಸೇನಾದ ಮುಖವಾಣಿ ‘ಸಾಮ್ನಾ’ದಲ್ಲಿ ಹೇಳಲಾಗಿದೆ.</p>.<p>ಸಾವರ್ಕರ್ ವಿಚಾರದಲ್ಲಿ ಸೇನಾವನ್ನು ಮೂಲೆಗುಂಪು ಮಾಡಬಹುದು ಎಂದು ಬಿಜೆಪಿ ಯೋಚಿಸುತ್ತಿದ್ದರೆ ಅದು ಸಾಧ್ಯವಿಲ್ಲ ಎಂದೂ ತಿಳಿಸಲಾಗಿದೆ.</p>.<p>‘ಸಾವರ್ಕರ್ಗೆ ಸಂಬಂಧಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಮಹಾರಾಷ್ಟ್ರದ ಬಿಜೆಪಿ ಮುಖಂಡರು ಘೋಷಿಸಿದ್ದಾರೆ. ಸಾವರ್ಕರ್ ಬಗ್ಗೆ ಬಿಜೆಪಿಗೆ ಗೌರವ ಅಥವಾ ವಿಶ್ವಾಸ ಇಲ್ಲ ಎಂಬುದನ್ನು ಇದು ಸೂಚಿಸುತ್ತದೆ. ಇದು ರಾಜಕೀಯ ವಿಚಾರ ಮಾತ್ರ’ ಎಂದು ವಿವರಿಸಲಾಗಿದೆ.</p>.<p>‘ವೀರ ಸಾವರ್ಕರ್ ಅವರು ಚರ್ಚೆಯವಿಷಯ ಮಾತ್ರ ಅಲ್ಲ. ಅವರ ಸಿದ್ಧಾಂತಗಳನ್ನು ಜೀವನದಲ್ಲಿ ಅನುಸರಿಸಬೇಕು. ಸಾವರ್ಕರ್ ಅವರ ಜೀವನವು ತ್ಯಾಗ, ತತ್ವ, ಹೋರಾಟದ ಸಂಕೇತ’ ಎಂದು ಸಾಮ್ನಾದಲ್ಲಿ ಬರೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ನವ ರಾಷ್ಟ್ರೀಯವಾದದ ರಾಜಕಾರಣಕ್ಕೆ ‘ಗುರಾಣಿ’ಯಾಗಿ ಹಿಂದುತ್ವ ಸಿದ್ಧಾಂತವಾದಿ ಸಾವರ್ಕರ್ ಅವರನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಶಿವಸೇನಾ ಆರೋಪಿಸಿದೆ.</p>.<p>ಸಾವರ್ಕರ್ ಬಗ್ಗೆ ಬಿಜೆಪಿಗೆ ಇರುವುದು ‘ನಕಲಿ’ ಪ್ರೀತಿ. ಕೇಂದ್ರವು ಸಾವರ್ಕರ್ಗೆ ಏಕೆ ಗೌರವಕೊಟ್ಟಿಲ್ಲ ಎಂಬ ಬಗ್ಗೆ ಬಿಜೆಪಿ ಮುಖಂಡರು ಪ್ರಶ್ನಿಸಬೇಕೇ ಹೊರತು ಮಹಾರಾಷ್ಟ್ರ ಸರ್ಕಾರವನ್ನು ಗುರಿ ಮಾಡಿಕೊಳ್ಳಬಾರದು ಎಂದು ಶಿವಸೇನಾದ ಮುಖವಾಣಿ ‘ಸಾಮ್ನಾ’ದಲ್ಲಿ ಹೇಳಲಾಗಿದೆ.</p>.<p>ಸಾವರ್ಕರ್ ವಿಚಾರದಲ್ಲಿ ಸೇನಾವನ್ನು ಮೂಲೆಗುಂಪು ಮಾಡಬಹುದು ಎಂದು ಬಿಜೆಪಿ ಯೋಚಿಸುತ್ತಿದ್ದರೆ ಅದು ಸಾಧ್ಯವಿಲ್ಲ ಎಂದೂ ತಿಳಿಸಲಾಗಿದೆ.</p>.<p>‘ಸಾವರ್ಕರ್ಗೆ ಸಂಬಂಧಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಮಹಾರಾಷ್ಟ್ರದ ಬಿಜೆಪಿ ಮುಖಂಡರು ಘೋಷಿಸಿದ್ದಾರೆ. ಸಾವರ್ಕರ್ ಬಗ್ಗೆ ಬಿಜೆಪಿಗೆ ಗೌರವ ಅಥವಾ ವಿಶ್ವಾಸ ಇಲ್ಲ ಎಂಬುದನ್ನು ಇದು ಸೂಚಿಸುತ್ತದೆ. ಇದು ರಾಜಕೀಯ ವಿಚಾರ ಮಾತ್ರ’ ಎಂದು ವಿವರಿಸಲಾಗಿದೆ.</p>.<p>‘ವೀರ ಸಾವರ್ಕರ್ ಅವರು ಚರ್ಚೆಯವಿಷಯ ಮಾತ್ರ ಅಲ್ಲ. ಅವರ ಸಿದ್ಧಾಂತಗಳನ್ನು ಜೀವನದಲ್ಲಿ ಅನುಸರಿಸಬೇಕು. ಸಾವರ್ಕರ್ ಅವರ ಜೀವನವು ತ್ಯಾಗ, ತತ್ವ, ಹೋರಾಟದ ಸಂಕೇತ’ ಎಂದು ಸಾಮ್ನಾದಲ್ಲಿ ಬರೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>