ಬಿಜೆಪಿ ಮೊದಲಿಗೆ ಈ ವಿಷಯವನ್ನು ಎತ್ತಲಿಲ್ಲ, ಸಂತರು ಮತ್ತು ಹಿಂದೂಪರ ಸಂಘಟನೆಗಳು ಈ ವಿಷಯವನ್ನು ದೊಡ್ಡದು ಮಾಡಿವೆ. ರಾಮಮಂದಿರ ವಿಷಯ ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುವುದಿಲ್ಲ ಹಾಗೇ ಚುನಾವಣೆಗೂ ಹೋಗುವುದಿಲ್ಲ, ನಾವು ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಎಂದು ವಿಜಯವರ್ಗಿಯ ತಿಳಿಸಿದರು. ಆದರೆ ವಿರೋಧ ಪಕ್ಷಗಳು ’ರಾಮಮಂದಿರಾ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡಿ, ಚುನಾವಣೆಯಲ್ಲಿ ಮತಗಳಿಸಲು ಯತ್ನಿಸುತ್ತಿದೆ ಎಂಬ ಸುಳ್ಳು ಆರೋಪ ಮಾಡುತ್ತಿವೆ ಎಂದು ಅವರು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು