ಮಮತಾ ಬ್ಯಾನರ್ಜಿ ಅವರ ಚುನಾವಣಾ ಕ್ಷೇತ್ರದಲ್ಲಿ ಬಿಜೆಪಿ ಕಚೇರಿ ಧ್ವಂಸ

ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಚುನಾವಣಾ ಕ್ಷೇತ್ರ ಭವಾನಿಪುರ್ನಲ್ಲಿ ಬಿಜೆಪಿ ಕಚೇರಿ ಧ್ವಂಸ ಮಾಡಲಾಗಿದೆ.
Kolkata: BJP office in Bhabanipur has been vandalised. More details awaited. #WestBengal pic.twitter.com/LvKXrQqtHW
— ANI (@ANI) February 4, 2019
Kolkata: @BJP4Bengal office in Bhabanipur vandalised
Read: https://t.co/wv2ANL5QMu pic.twitter.com/aCqFgdsS4T
— Newsd (@GetNewsd) February 4, 2019
ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ವಿರೋಧಿಸಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಕೋಲ್ಕತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
West Bengal: TMC workers protest against PM Narendra Modi and Central govt over CBI issue in Kolkata. pic.twitter.com/gg7w2MLusR
— ANI (@ANI) February 4, 2019
ಬಿಜೆಪಿಯನ್ನು ನೀವು ವಿರೋಧಿಸಿದರೆ ಕೇಂದ್ರೀಯ ಸಂಸ್ಥೆಗಳು ನಿಮ್ಮ ಮೇಲೆ ದಾಳಿ ನಡೆಸುತ್ತವೆ: ಮಮತಾ
ನಮ್ಮಲ್ಲಿ ಭಿನ್ನತೆಗಳು ಇರಬಹುದು. ಆದರೆ ನೀವು ಬಿಜೆಪಿಯನ್ನು ವಿರೋಧಿಸಿದರೆ ಕೇಂದ್ರೀಯ ಸಂಸ್ಥೆಗಳು ನಿಮ್ಮ ಮೇಲೆ ದಾಳಿ ನಡೆಸುತ್ತವೆ. ನಿಮ್ಮನ್ನು ಜೈಲಿಗೆ ತಳ್ಳುತ್ತವೆ. ನಿಮ್ಮನ್ನು ದೇಶದ್ರೋಹಿ ಎಂದು ಕರೆಯುತ್ತಾರೆ ಎಂದು ಧರಣಿ ಸತ್ಯಾಗ್ರಹ ನಡೆಸುತ್ತಿರುವ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಇದೊಂದು ದೊಡ್ಡ ಸಮರ, ಇದಕ್ಕೆ ದೇಶದಾದ್ಯಂತವಿರುವ ಜನರಿಂದ ನಮಗೆ ಬೆಂಬಲ ಸಿಕ್ಕಿದೆ ಎಂದು ಹೇಳಿದ ಮಮತಾ ಈ ಪ್ರತಿಭಟನೆಯಿಂದಾಗಿ ಬಂಗಾಳ ಸರ್ಕಾರದ ಕೆಲಸಗಳು ಸ್ಥಗಿತಗೊಳ್ಳುವುದಿಲ್ಲ ಎಂದಿದ್ದಾರೆ.
ನಮ್ಮ ಸತ್ಯಾಗ್ರಹ ಯಾವುದೇ ಸಂಸ್ಥೆ ವಿರುದ್ದ ಅಲ್ಲ. ಇದು ಮೋದಿ ಸರ್ಕಾರದ ಸರ್ವಾಧಿಕಾರದ ವಿರುದ್ಧ ಎಂದು ಮಮತಾ ಹೇಳಿದ್ದಾರೆ.
ಇದನ್ನೂ ಓದಿ:
ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರ್ಕಾರದ ನಡೆ ಅಪಾಯಕಾರಿ: ಕೇಜ್ರಿವಾಲ್
ಟಿಎಂಸಿ ಕಾರ್ಯಕರ್ತರಿಂದ ಪ್ರಧಾನಿ ಪ್ರತಿಕೃತಿ ದಹನ
ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಧೈರ್ಯವಿದೆಯೇ?: ಮೋದಿಗೆ ಮಮತಾ ಸವಾಲು
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.