<p><strong>ಕಲ್ಯಾಣಿ: </strong>ಕಾಶ್ಮೀರವನ್ನು ಭಾರತದಿಂದ ವಿಭಜಿಸಿ ದೇಶವನ್ನು ಇಭ್ಬಾಗಮಾಡುವವರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.</p>.<p>ಇಲ್ಲಿನ ಬೊಂಗಾವ್ ಲೋಕಸಭಾ ಕ್ಷೇತ್ರದಲ್ಲಿ ಬುಧವಾರ ಚುನಾವಣಾ ರ್ಯಾಲಿ ನಡೆಸಿದ ಅಮಿತ್ ಶಾ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಅದನ್ನು ಹಾಗೇ ಕಾಪಾಡಿಕೊಳ್ಳಲು ನಮ್ಮ ಪಕ್ಷ ಹೋರಾಡಲಿದೆ.ಕೇಂದ್ರದಲ್ಲಿ ಯಾವುದೇ ಸರ್ಕಾರ ಇರಲಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.</p>.<p>ಇಂದು ನಾವು ಅಧಿಕಾರದಲ್ಲಿದ್ದೇವೆ.ಮೋದಿಯವರು ಪ್ರಧಾನಿಯಾಗಿದ್ದಾರೆ. ಮುಂದಿನ ದಿನಗಳಲ್ಲಿಯೂ ಹೀಗೆ ಇರುತ್ತದೆ.ಒಂದು ವೇಳೆ ಬಿಜೆಪಿ ಅಧಿಕಾರದಲ್ಲಿ ಇಲ್ಲದೇ ಇದ್ದರೂ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿ ಇರುವಂತೆ ನಮ್ಮ ಕಾರ್ಯಕರ್ತರು ಹೋರಾಡಲಿದ್ದಾರೆ.</p>.<p>ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೇರಿದರೆ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370ನ್ನು ನಾವು ತೆಗೆದುಹಾಕುತ್ತೇವೆ<br />ಬಂಗಾಳದಲ್ಲಿ ನಮಗೆ 30 ಸೀಟು ಕೊಡಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೇರಿದ ನಂತರ ಆರ್ಟಿಕಲ್ 370ನ್ನು ರದ್ದು ಮಾಡುತ್ತೇವೆ ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕು ಎಂಬ ಒಮರ್ ಅಬ್ದುಲ್ಲಾ ಅವರ ಒತ್ತಾಯದ ಬಗ್ಗೆ ಮಮತಾ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ ಅಮಿತ್ ಶಾ.</p>.<p>ಏತನ್ಮಧ್ಯೆ, ನುಸುಳುಕೋರರನ್ನು ಗೆದ್ದಲು ಎಂದ ಶಾ, ಅವರು ದೇಶದ ಸಂಪನ್ಮೂಲಗಳನ್ನು ತಿನ್ನುತ್ತಿದ್ದಾರೆ.ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೇರಿದರೆ ಅವರನ್ನು ದೇಶದಿಂದ ಹೊರಗೆ ಕಿತ್ತೆಸೆಯುತ್ತೇವೆ ಎಂದು ಬಿಜೆಪಿ ಅಧ್ಯಕ್ಷರು ಗುಡುಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲ್ಯಾಣಿ: </strong>ಕಾಶ್ಮೀರವನ್ನು ಭಾರತದಿಂದ ವಿಭಜಿಸಿ ದೇಶವನ್ನು ಇಭ್ಬಾಗಮಾಡುವವರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.</p>.<p>ಇಲ್ಲಿನ ಬೊಂಗಾವ್ ಲೋಕಸಭಾ ಕ್ಷೇತ್ರದಲ್ಲಿ ಬುಧವಾರ ಚುನಾವಣಾ ರ್ಯಾಲಿ ನಡೆಸಿದ ಅಮಿತ್ ಶಾ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಅದನ್ನು ಹಾಗೇ ಕಾಪಾಡಿಕೊಳ್ಳಲು ನಮ್ಮ ಪಕ್ಷ ಹೋರಾಡಲಿದೆ.ಕೇಂದ್ರದಲ್ಲಿ ಯಾವುದೇ ಸರ್ಕಾರ ಇರಲಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.</p>.<p>ಇಂದು ನಾವು ಅಧಿಕಾರದಲ್ಲಿದ್ದೇವೆ.ಮೋದಿಯವರು ಪ್ರಧಾನಿಯಾಗಿದ್ದಾರೆ. ಮುಂದಿನ ದಿನಗಳಲ್ಲಿಯೂ ಹೀಗೆ ಇರುತ್ತದೆ.ಒಂದು ವೇಳೆ ಬಿಜೆಪಿ ಅಧಿಕಾರದಲ್ಲಿ ಇಲ್ಲದೇ ಇದ್ದರೂ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿ ಇರುವಂತೆ ನಮ್ಮ ಕಾರ್ಯಕರ್ತರು ಹೋರಾಡಲಿದ್ದಾರೆ.</p>.<p>ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೇರಿದರೆ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370ನ್ನು ನಾವು ತೆಗೆದುಹಾಕುತ್ತೇವೆ<br />ಬಂಗಾಳದಲ್ಲಿ ನಮಗೆ 30 ಸೀಟು ಕೊಡಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೇರಿದ ನಂತರ ಆರ್ಟಿಕಲ್ 370ನ್ನು ರದ್ದು ಮಾಡುತ್ತೇವೆ ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕು ಎಂಬ ಒಮರ್ ಅಬ್ದುಲ್ಲಾ ಅವರ ಒತ್ತಾಯದ ಬಗ್ಗೆ ಮಮತಾ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ ಅಮಿತ್ ಶಾ.</p>.<p>ಏತನ್ಮಧ್ಯೆ, ನುಸುಳುಕೋರರನ್ನು ಗೆದ್ದಲು ಎಂದ ಶಾ, ಅವರು ದೇಶದ ಸಂಪನ್ಮೂಲಗಳನ್ನು ತಿನ್ನುತ್ತಿದ್ದಾರೆ.ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೇರಿದರೆ ಅವರನ್ನು ದೇಶದಿಂದ ಹೊರಗೆ ಕಿತ್ತೆಸೆಯುತ್ತೇವೆ ಎಂದು ಬಿಜೆಪಿ ಅಧ್ಯಕ್ಷರು ಗುಡುಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>