ಸುದ್ದಿಗಾರರ ಜತೆ ಮಾತನಾಡಿದ ಅವರು ‘ಬಿಜೆಪಿ ಮತ್ತು ಆರ್ಎಸ್ಎಸ್ ಸಾಂಸ್ಥಿಕ ರಚನೆಯನ್ನು ಹಾಳು ಮಾಡುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅಥವಾಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರುಮೀಸಲಾತಿ ಕೊನೆಗೊಳಿಸುವ ಕುರಿತು ಏನೇ ಕನಸು ಕಂಡರೂ ನಾವದಕ್ಕೆ ಅವಕಾಶ ನೀಡುವುದಿಲ್ಲ ಎಂಬುದನ್ನು ಎಸ್ಸಿ, ಎಸ್ಟಿ, ಒಬಿಸಿ ಮತ್ತು ದಲಿತರಿಗೆ ಹೇಳಬಯಸುತ್ತೇನೆ’ ಎಂದಿದ್ದಾರೆ.