ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಬುಧವಾರ ಬಹುಮತ ಸಾಬೀತಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಮಂಗಳವಾರದ ತೀರ್ಪಿನಲ್ಲಿ ಹೇಳಿತ್ತು. ಎಲ್ಲ ಸದಸ್ಯರು ನಾಳೆಯೇ ಪ್ರಮಾಣ ವಚನ ಸ್ವೀಕರಿಸಬೇಕು. ಸಂಜೆ 5 ಗಂಟೆಯ ಒಳಗೆ ವಿಶ್ವಾಸಮತಯಾಚನೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು ಎಂದು ಕೋರ್ಟ್ ಸೂಚಿಸಿದೆ.