ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಹುಮತ ಸಾಬೀತಿಗೆ ನಾವು ಸಿದ್ಧ: ಕೋರ್ಟ್‌ ತೀರ್ಪಿಗೆ ಬಿಜೆಪಿ ಪ್ರತಿಕ್ರಿಯೆ

Last Updated 26 ನವೆಂಬರ್ 2019, 7:01 IST
ಅಕ್ಷರ ಗಾತ್ರ

ಮುಂಬೈ: ‘ಸುಪ್ರೀಂ ಕೋರ್ಟ್‌ ತೀರ್ಪನ್ನು ನಾವು ಗೌರವಿಸುತ್ತೇವೆ. ಬುಧವಾರ (ನ.27) ಬಹುಮತ ಸಾಬೀತುಪಡಿಸುತ್ತೇವೆ’ಎಂದು ಬಿಜೆಪಿ ಹೇಳಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದಮಹಾರಾಷ್ಟ್ರದ ಬಿಜೆಪಿ ನಾಯಕ ಚಂದ್ರಕಾಂತ್ ಪಾಟೀಲ್ ‘ಬಹುಮತ ಸಾಬೀತುಪಡಿಸುವ ವಿಶ್ವಾಸ ನಮಗಿದೆ’ ಎಂದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಬುಧವಾರ ಬಹುಮತ ಸಾಬೀತಪಡಿಸಬೇಕು ಎಂದು ಸುಪ್ರೀಂ ಕೋರ್ಟ್‌ ತನ್ನ ಮಂಗಳವಾರದ ತೀರ್ಪಿನಲ್ಲಿ ಹೇಳಿತ್ತು. ಎಲ್ಲ ಸದಸ್ಯರು ನಾಳೆಯೇ ಪ್ರಮಾಣ ವಚನ ಸ್ವೀಕರಿಸಬೇಕು. ಸಂಜೆ 5 ಗಂಟೆಯ ಒಳಗೆ ವಿಶ್ವಾಸಮತಯಾಚನೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು ಎಂದು ಕೋರ್ಟ್‌ ಸೂಚಿಸಿದೆ.

ವಿಶ್ವಾಸಮತಯಾಚನೆ ಪ್ರಕ್ರಿಯೆ ನೇರ ಪ್ರಸಾರವಾಗಬೇಕು. ಗೌಪ್ಯ ಮತದಾನಕ್ಕೆ ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್‌ ತನ್ನ ಆದೇಶದಲ್ಲಿ ತಿಳಿಸಿತ್ತು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT