ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧಿ ಹತ್ಯೆ ಸಂಚಿನಲ್ಲಿ ಸಾವರ್ಕರ್ ಹೆಸರಿತ್ತು, ಮರೆಯಬೇಡಿ: ದಿಗ್ವಿಜಯ್ ಸಿಂಗ್

ಬಿಜೆಪಿಯ ಭಾರತ ರತ್ನ ಪ್ರಸ್ತಾವಕ್ಕೆ ಆಕ್ಷೇಪ
Last Updated 17 ಅಕ್ಟೋಬರ್ 2019, 7:45 IST
ಅಕ್ಷರ ಗಾತ್ರ

ಇಂದೋರ್ (ಮಧ್ಯಪ್ರದೇಶ):ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಬಿಜೆಪಿಯ ಪ್ರಸ್ತಾವಕ್ಕೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಹಾತ್ಮ ಗಾಂಧಿ ಹತ್ಯೆ ಸಂಚಿನಲ್ಲಿ ಸಾವರ್ಕರ್ ಹೆಸರೂ ಇತ್ತು ಎಂಬುದನ್ನು ಬಿಜೆಪಿ ಮರೆಯಬಾರದು ಎಂದು ಅವರು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾವರ್ಕರ್ ಬದುಕಿನಲ್ಲಿ ಎರಡು ಆಯಾಮಗಳಿದ್ದವು. ಒಂದನೆಯದ್ದು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದದ್ದು ಮತ್ತು ಇನ್ನೊಂದು ಬ್ರಿಟಿಷರ ಕ್ಷಮೆ ಕೋರಿ ವಾಪಸಾದದ್ದು. ಗಾಂಧಿ ಹತ್ಯೆ ಸಂಚಿನಲ್ಲಿ ಅವರ ಹೆಸರಿದ್ದುದನ್ನು ಬಿಜೆಪಿ ಮರೆಯಬಾರದು’ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವೀರ ಸಾವರ್ಕರ್, ಮಹಾತ್ಮ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರಿಗೆ ಭಾರತ ರತ್ನಕ್ಕೆ ಶಿಫಾರಸು ಪ್ರಸ್ತಾವ ಒಳಗೊಂಡ ಚುನಾವಣಾ ಪ್ರಣಾಳಿಕೆಯನ್ನುಬಿಜೆಪಿ ಮಂಗಳವಾರ ಬಿಡುಗಡೆ ಮಾಡಿತ್ತು.

ಮಹಾರಾಷ್ಟ್ರದ ಅಕೋಲದಲ್ಲಿ ಬುಧವಾರ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ,ರಾಷ್ಟ್ರ ನಿರ್ಮಾಣಕ್ಕಾಗಿ ರಾಷ್ಟ್ರೀಯತೆಯ ಪ್ರೇರಣೆ ನೀಡಿದವರು ವೀರ್ ಸಾವರ್ಕರ್. ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ದಶಕಗಳ ಕಾಲ ಭಾರತರತ್ನ ನೀಡದೆ ಪ್ರತಿ ಬಾರಿಯೂ ಅವಮಾನ ಮಾಡಿದ ಜನರೇ ಈಗ ಹಿಂದುತ್ವವಾದಿ ವಿ.ಡಿ. ಸಾವರ್ಕರ್‌ನ್ನು ಅವಮಾನ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT