ಅಯೋಧ್ಯೆ ಪ್ರಕರಣದ ವಿಚಾರಣೆಯನ್ನು 2019ರ ಜನವರಿಯಲ್ಲಿ ಸೂಕ್ತ ನ್ಯಾಯಪೀಠ ಕೈಗೆತ್ತಿಕೊಳ್ಳಲಿದೆ ಎಂದು ಅಕ್ಟೋಬರ್ನಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ಇದರಿಂದ, ವೇಗವಾಗಿ ಪ್ರಕರಣದ ಇತ್ಯರ್ಥವಾಗಬೇಕು ಎಂದು ಬಯಸಿದ್ದ ಬಿಜೆಪಿಯಹಲವು ನಾಯಕರಿಗೆ ಹಿನ್ನಡೆಯಾಗಿತ್ತು. ಮತ್ತೊಂದೆಡೆ, 2019ರ ಲೋಕಸಭಾ ಚುನಾವಣೆ ನಂತರವೇ ಅಯೋಧ್ಯೆ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.