ಈ ಕುರಿತು ಪ್ರತಿಕ್ರಿಯಿಸಿದ ಸುಧೀರ್, ‘ಉದ್ಧವ್ ಅವರು ಉತ್ತಮ ನಿರ್ಧಾರ ಕೈಗೊಂಡಿದ್ದಾರೆ. ಶಿವಸೇನಾ ಜತೆ ನಮ್ಮ ಮೈತ್ರಿಯು ಸಿದ್ಧಾಂತದ ತಳಹದಿಯಿಂದ ಕೂಡಿತ್ತು. ಮುಸ್ಲಿಂ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಎನ್ಸಿಪಿಯ ಒತ್ತಡದ ಬಗ್ಗೆ ಸೇನಾ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಅವರು ಸರ್ಕಾರದಿಂದ ಹೊರನಡೆದರೂ ಈ ವಿಚಾರದಲ್ಲಿ ಸರ್ಕಾರಕ್ಕೆ ನಾವು ಬೆಂಬಲ ನೀಡಲಿದ್ದೇವೆ’ ಎಂದು ಹೇಳಿದ್ದಾರೆ.