ಇಲ್ಲಿ ಶನಿವಾರ ವಿರೋಧ ಪಕ್ಷಗಳ ನಾಯಕರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದ ಹಿತಾಸಕ್ತಿ ಕಾಪಾಡುವ ಉದ್ದೇಶಕ್ಕಾಗಿ ರಾಜಕೀಯ ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ. ಕೆಲವರು ಚುನಾವಣೆಗೆ ಮುನ್ನ ಕೈಜೋಡಿಸಿದರೆ ಮತ್ತೆ ಕೆಲವು ಚುನಾವಣೆ ನಂತರ ಬಿಜೆಪಿಯೇತರ ಒಕ್ಕೂಟ ಸೇರಬಹುದು’ ಎಂದು ಹೇಳಿದರು.