ಪಶ್ಚಿಮ ಬಂಗಾಳದಲ್ಲಿ ಮತದಾನದ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಕುರಿತು ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಸ್ವಸ್ಥ್ಯ ಪ್ರಜಾಪ್ರಭುತ್ವದಲ್ಲಿ ರಾಜಕೀಯ ಹಿಂಸಾಚಾರಕ್ಕೆ ಜಾಗವಿಲ್ಲ. ದುರದೃಷ್ಟವಶಾತ್ ಪಶ್ಚಿಮ ಬಂಗಾಳದಲ್ಲಿ ಪದೇ ಪದೇ ಆ ರೀತಿ ಘಟನೆಗಳು ನಡೆಯುತ್ತಿವೆ. ಇದರಲ್ಲಿ ಇನ್ನಷ್ಟು ಬೇಸರ ತರುವ ಅಂಶವೆಂದರೆ, ಈ ಘಟನೆಗಳನ್ನು ಮುಖ್ಯಮಂತ್ರಿ ತಡೆಯಲು ಸಾಧ್ಯವಾಗುತ್ತಿಲ್ಲ ಎನ್ನುವುದು’ ಎಂದು ಟೀಕಿಸಿದರು.