ಗುಜರಾತ್ನಲ್ಲಿ ಕಾಂಗ್ರೆಸ್ ವಿಧಾನಸಭೆ ವಿರೋಧಪಕ್ಷದ ನಾಯಕ ಪರೇಶ್ ಧನ್ನಾನಿ ಸೇರಿ ಏಳು ಶಾಸಕರನ್ನು ಕಣಕ್ಕಿಳಿಸಿತ್ತು. ಇನ್ನೊಂದೆಡೆ, ಬಿಜೆಪಿಯು 12ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿ ಹೊಸಬರನ್ನು ಕಣಕ್ಕಿಳಿಸಿತ್ತು. ಕೇಂದ್ರದ ಮಾಜಿ ಸಚಿವ ಭರತ್ಸಿಂಹ ಸೋಳಂಕಿ (ಆನಂದ್), ವಿಧಾನಸಭೆ ಪ್ರತಿಪಕ್ಷದ ನಾಯಕ ಪರೇಶ್ ಧನ್ನಾನಿ (ಅಮ್ರೇಲಿ), ಲಲಿತ್ ವಸೋಯ (ಪೋರಬಂದರ್) ಅವರು ಗೆಲ್ಲಬಹುದೆಂಬ ವಿಶ್ವಾಸವನ್ನು ಕಾಂಗ್ರೆಸ್ ಹೊಂದಿತ್ತು. ಆದರೆ ಬಿಜೆಪಿಯ ಅಲೆಯಲ್ಲಿ ಎಲ್ಲರೂ ಕೊಚ್ಚಿಹೋಗಿದ್ದಾರೆ.