ಬಿಜೆಪಿ ಕಾರ್ಯಕರ್ತ ಚಂದನ್ ಷಾ ಕೊಲೆಯಾದ ವ್ಯಕ್ತಿ. ಈತನನ್ನು ನಾಲ್ಕೈದು ಮಂದಿ ಅಪರಿಚಿತರು ಶಸ್ತ್ರಧಾರಿಗಳಾಗಿ ಬಂದು ಗುಂಡಿಕ್ಕಿ ಪರಾರಿಯಾಗಿದ್ದಾರೆ. ಚಂದನ್ ಷಾ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದ್ದ ಎನ್ನಲಾಗಿದೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಶವವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.