ಬಿಜೆಪಿಯ ಕಾರ್ಯಕರ್ತರಿಗೆ ಶುಭಾಶಯಗಳು. ರಕ್ತ ಮತ್ತು ಬೆವರಿನಿಂದ ಪಕ್ಷಕ್ಕೆ ನೀರುಣಿಸಿದ ಎಲ್ಲರನ್ನೂ ನಾನು ಗೌರವಿಸುತ್ತೇನೆ. ಅವರ ಕಾರಣದಿಂದಾಗಿ ಇಂದು ದೇಶಾದ್ಯಂತ ಕೋಟ್ಯಂತರ ಭಾರತೀಯರಿಗೆ ಸೇವೆ ಸಲ್ಲಿಸಲು ಬಿಜೆಪಿಗೆ ಅವಕಾಶ ಸಿಕ್ಕಿದೆ. ಪಕ್ಷದ ತತ್ವಗಳಿಗೆ ಅನುಸಾರವಾಗಿ, ನಮ್ಮ ಕಾರ್ಯಕರ್ತರು ಜನರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಶ್ರಮಿಸಿದ್ದಾರೆ. ಮತ್ತು, ಸಾಮಾಜ ಸೇವೆಯ ಹೊಸ ಮಾದರಿಯನ್ನು ನೀಡಿದ್ದಾರೆ. ದೇಶವು COVID-19 ವಿರುದ್ಧ ಹೋರಾಡುತ್ತಿರುವ ಈ ಸಮಯದಲ್ಲಿ ಬಿಜೆಪಿಯ 40ನೇ ಸಂಸ್ಥಾಪನಾ ದಿನವೂ ಬಂದಿದೆ. ಈ ಸಮಯದಲ್ಲಿ ಪಕ್ಷದ ಕಾರ್ಯಕರ್ತರು, ಪಕ್ಷದ ಅಧ್ಯಕ್ಷರು ಮಾರ್ಗಸೂಚಿಗಳನ್ನು ಪಾಲಿಸುವಂತೆ ನಾನು ಆಗ್ರಹಿಸುತ್ತೇನೆ. ಕಾರ್ಯಕರ್ತರು ಅವುಗಳನ್ನು ಅನುಸರಿಸಬೇಕು. ಸಾಮಾಜಿಕ ಅಂತರ ಪಾಲಿಸಿ. COVID-19 ವಿರುದ್ಧ ಭಾರತವನ್ನು ಒಗ್ಗೂಡಿಸಿ ಮತ್ತು ಅದರಿಂದ ದೇಶವನ್ನು ಮುಕ್ತಗೊಳಿಸಿ,’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.