ಕಾಯ್ದೆಯನ್ನು ಎಜಿಪಿ ಮೊದಲು ವಿರೋಧಿಸಿತ್ತು. ಬಿಜೆಪಿ ನೇತೃತ್ವದ ಅಸ್ಸಾಂ ಸರ್ಕಾರದಿಂದ ಹೊರಗೆ ಬಂದಿತ್ತು. ಬಳಿಕ, ತಮ್ಮ ಕಳವಳಕ್ಕೆ ಸರ್ಕಾರ ಪರಿಹಾರ ಸೂಚಿಸಿದೆ ಎಂದು ಹೇಳಿ ಸಂಸತ್ತಿನಲ್ಲಿ ಮಸೂದೆಯನ್ನು ಬೆಂಬಲಿಸಿತ್ತು. ಆದರೆ, ಪಕ್ಷದ ಮುಖ್ಯಸ್ಥ ಅತುಲ್ ಬೋರಾ ಅವರ ನಿಲುವನ್ನು ಪ್ರಫುಲ್ಲ ಕುಮಾರ್ ಮಹಾಂತ ಅವರು ವಿರೋಧಿಸಿದ್ದಾರೆ. ಬೋರಾ ಅವರ ನಿಲುವನ್ನು ವಿರೋಧಿಸಿ ಪಕ್ಷದ ಹಲವು ಮುಖಂಡರು ರಾಜೀನಾಮೆ ನೀಡಿದ್ದಾರೆ.