ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡಮಾರುತ: ದೋಣಿ ಮುಳುಗಿ ಮೂವರು ನಾಪತ್ತೆ

Last Updated 1 ಮೇ 2019, 18:25 IST
ಅಕ್ಷರ ಗಾತ್ರ

ವಿಶಾಖಪಟ್ಟಣಂ: ಚಂಡಮಾರುತಕ್ಕೆ ಸಿಲುಕಿ ದೋಣಿ ಮಗುಚಿದ ಪರಿಣಾಮ ಇಂಫಾಲ್‌ನ ಮೂವರು ಮೀನುಗಾರರು ನಾಪತ್ತೆಯಾಗಿದ್ದು, ಭಾರತೀಯ ನೌಕಾಪಡೆಯ ಮುಳುಗು ತಜ್ಞರ ತಂಡ ಶೋಧ ಕಾರ್ಯದಲ್ಲಿ ತೊಡಗಿದೆ.

ಕಾಮ್‌ಜೊಂಗ್‌ ಜಿಲ್ಲೆಯ ಮಾಪಿಥಾಲ್‌ ಜಲಾಶಯದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯು ಏಪ್ರಿಲ್ 28ರಂದು ಬೀಸಿದ ಚಂಡಮಾರುತಕ್ಕೆ ಸಿಲುಕಿ ಮುಳುಗಿತ್ತು.

ಮಣಿಪುರ ಸರ್ಕಾರದ ಮನವಿ ಮೇರೆಗೆ 12 ಮುಳುಗು ತಜ್ಞರು ಹಾಗೂ ಇಬ್ಬರು ಜಲತಜ್ಞರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ನೌಕಾಪಡೆಯು ಪ್ರಕಟಣೆಯಲ್ಲಿ ತಿಳಿಸಿದೆ.ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ಈಗಾಗಲೇ ಶೋಧ ಕಾರ್ಯ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT