ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕ್ರಮವನ್ನು ಟೀಕಿಸಿದ್ದ ಬ್ರಿಟನ್ ಸಂಸದೆ ಡೆಬ್ಬಿ ಅಬ್ರಹಮ್ಸ್ ಅವರು ಮಾನ್ಯತೆ ಪಡೆದ ವೀಸಾ ಹೊಂದಿಲ್ಲ ಎಂದು ಅವರಿಗೆ ಭಾರತ ಪ್ರವೇಶಿಸಲು ಅಧಿಕಾರಿಗಳು ನಿರಾಕರಿಸಿದ್ದಾರೆ.
ಲೇಬರ್ ಪಕ್ಷದ ಸಂಸದೆ ಅಬ್ರಹಮ್ಸ್ ಅವರು ಕಾಶ್ಮೀರಕ್ಕೆ ತೆರಳುವ ಸಂಸತ್ ಸದಸ್ಯರ ಗುಂಪಿನ ಅಧ್ಯಕ್ಷರೂ ಆಗಿದ್ದಾರೆ. ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಇಲ್ಲಿನ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ಬೆಳಿಗ್ಗೆ 9ಕ್ಕೆ, ಭಾರತದ ಹರ್ಪ್ರೀತ್ ಉಪಲ್ ಜೊತೆಗೆ ಅವರು ಬಂದಿಳಿದಿದ್ದರು.
ಎರಡು ದಿನಗಳ ಕಾಲ ಅವರು ಭಾರತದಲ್ಲಿ ಪ್ರವಾಸ ಕೈಗೊಳ್ಳಲಿದ್ದ ಅವರು ಒಂದು ವರ್ಷದ ಮಾನ್ಯತೆಯೊಂದಿಗೆ ಕಳೆದ ಅಕ್ಟೋಬರ್ನಲ್ಲಿ ಇ–ವೀಸಾ ಪಡೆದಿದ್ದರು.
Ministry of Home Affairs (MHA) sources: British MP Debbie Abrahams' e-visa was cancelled so she was not allowed entry in Delhi today (after she arrived at Indira Gandhi International Airport on Emirates flight from Dubai at 9 am). She was informed about it timely&with due process pic.twitter.com/Cr7LXhQiaM
— ANI (@ANI) February 17, 2020
ಅವರು ಭಾರತಕ್ಕೆ ಬರುವ ಮೊದಲೇ ಅವರ ಇ–ವೀಸಾ ರದ್ದುಪಡಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ. ಇದರ ಹೊರತಾಗಿಯೂ ಅವರು ಭಾರತಕ್ಕೆ ಬಂದಿದ್ದಾರೆ ಎಂದು ತಿಳಿಸಿರುವ ಗೃಹ ಸಚಿವಾಲಯದ ಅಧಿಕಾರಿಗಳು, ಇ–ವೀಸಾ ರದ್ದತಿಗೆ ಯಾವುದೇ ಕಾರಣವನ್ನು ತಿಳಿಸಿಲ್ಲ.
‘ನಾನು ಭಾರತದಲ್ಲಿ ಸಂಬಂಧಿಕರನ್ನು ಹೊಂದಿದ್ದೇನೆ. ನನ್ನೊಂದಿಗೆ ಭಾರತದ ಸಿಬ್ಬಂದಿ ಸಹ ಇದ್ದಾರೆ. ಸಾಮಾಜಿಕ ನ್ಯಾಯ ಮತ್ತು ಮಾನವ ಹಕ್ಕುಗಳ ರಕ್ಷಣೆಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ. ಈ ವಿಷಯದಲ್ಲಿ ನಮ್ಮ ಹಾಗೂ ಇತರೆ ದೇಶಗಳ ಸರ್ಕಾರಗಳನ್ನೂ ಪ್ರಶ್ನಿಸುತ್ತೇನೆ, ಇದು ಮುಂದುವರಿಯಲಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಭಾರತ ಕಾಶ್ಮೀರದಲ್ಲಿ 370ನೇ ವಿಧಿ ರದ್ದು ಮಾಡಿದಾಗ ಇದು ಕಾಶ್ಮೀರದ ಜನರ ನಂಬಿಕೆಗೆ ದ್ರೋಹಮಾಡಿದಂತಾಗಿದೆ ಎಂದು ಅಬ್ರಹಮ್ಸ್ ಟೀಕಿಸಿದ್ದರು.
‘ವಲಸೆ ಅಧಿಕಾರಿಗಳಿಗೆ ಇ–ವೀಸಾ ಸೇರಿದಂತೆ ಎಲ್ಲ ದಾಖಲೆಗಳನ್ನು ತೋರಿಸಲಾಗಿದೆ. ನನ್ನ ಭಾವಚಿತ್ರವನ್ನು ಸಹ ಅವರು ಸೆರೆ ಹಿಡಿದಿದ್ದಾರೆ. ನಂತರ ನನ್ನ ಇ–ವೀಸಾ ತಿರಸ್ಕರಿಸಲಾಗಿದೆ ಎಂದು ಹೇಳಿದ ಅಧಿಕಾರಿಯು, 10 ನಿಮಿಷ ನಂತರಅಲ್ಲಿಂದ ತೆರಳಿದ್ದರು. ಮರಳಿ ಬಂದ ನಂತರ ಅಸಭ್ಯವಾಗಿ ಮತ್ತು ಆಕ್ರಮಣಕಾರಿಯಾಗಿ ನಡೆದುಕೊಂಡರು. ನಂತರ ನನ್ನನ್ನು ನಿಲ್ದಾಣದ ಬೇರೆ ಕಡೆಗೆ ಕರೆದುಕೊಂಡು ಹೋಗಿ ಕುಳಿತುಕೊಳ್ಳುವಂತೆ ಆದೇಶಿಸಿದರು. ಜನರು ಈ ಎಲ್ಲ ಬೆಳವಣಿಗೆಗಳನ್ನು ನೋಡಲಿ ಎಂಬ ಉದ್ದೇಶದಿಂದ ಈ ಆದೇಶವನ್ನು ತಿರಸ್ಕರಿಸಿದೆ’ ಎಂದು ಅವರು ತಿಳಿಸಿದ್ದಾರೆ.
In response to some of the comments I was planning to visit Indian family in Dehli accompanied by my Indian aide. I became a politician to promote social justice & human rights FOR ALL. I will continue to challenge my own Government & others while injustice & abuse is unchecked https://t.co/YvCOPDmfeB
— Debbie Abrahams (@Debbie_abrahams) February 17, 2020
‘ನನ್ನ ಮೇಲೆ ನಿಗಾ ವಹಿಸಿರುವ ಅಧಿಕಾರಿಗೂ ಯಾವುದೇ ಮಾಹಿತಿ ಇಲ್ಲ. ನನ್ನನ್ನು ಅಪರಾಧಿಯಂತೆ ಪರಿಗಣಿಸಲಾಗಿದೆ ಎಂಬ ಅಂಶವನ್ನು ನನ್ನ ಹೇಳಿಕೆಯಿಂದ ಹಿಂಪಡೆಯಲು ಸಿದ್ಧವಿದ್ದೇನೆ. ನನ್ನ ಕುಟುಂಬ ಮತ್ತು ಸ್ನೇಹಿತರನ್ನು ಭೇಟಿ ಮಾಡಲು ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಇದೆ’ ಎಂದು ಅಬ್ರಹಮ್ಸ್ ತಿಳಿಸಿದ್ದಾರೆ.
I'm sorry but that just is not the reality https://t.co/ayxfLAGQMM
— Debbie Abrahams (@Debbie_abrahams) February 17, 2020
ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, ‘ಈ ಕ್ರಮವು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಕಾಶ್ಮೀರದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಹಾಗಾದರೆ, ವಿಮರ್ಶಕರಿಗೆ ಏಕೆ ಹೆದರುತ್ತಿದೆ? ಅಲ್ಲಿನ ಪರಿಸ್ಥಿತಿ ಉತ್ತಮವಿದ್ದರೆ, ವಿಮರ್ಶಕರಿಗೆ ಸ್ವತಃ ಅಲ್ಲಿಗೆ ಭೇಟಿ ನೀಡಲು ಸರ್ಕಾರ ಪ್ರೋತ್ಸಾಹಿಸಬಾರದೇಕೆ?’ ಎಂದು ಟ್ವೀಟ್ ಮಾಡಿದ್ದಾರೆ.
If things are fine in #Kashmir, shouldn't the Govt encourage critics to witness the situation themselves to put their fears to rest? Instead of conducting tours for pliant MEPs &polite Ambassadors alone, surely the head of a ParliamentaryGroup on the subject is worth cultivating? https://t.co/vMtcAXCDb9
— Shashi Tharoor (@ShashiTharoor) February 17, 2020
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.