ನವದೆಹಲಿ:ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆಗೆ ಬಹುಮತ ಕೊರತೆ ಇರುವ ಕಾಂಗ್ರೆಸ್ಗೆ ಬೆಂಬಲ ನೀಡುವುದಾಗಿ ಬಿಎಸ್ಪಿ ಮುಖ್ಯಸ್ಥೆ ಮಯಾವತಿ ಹೇಳಿದ್ದಾರೆ. ಕಾಂಗ್ರೆಸ್ಗೆ ಎರಡು ಸ್ಥಾನ ಕೊರತೆ ಇತ್ತು. ಬಿಎಸ್ಪಿ ಎರಡು ಸ್ಥಾನ ಗೆದ್ದಿದೆ.
ಕಾಂಗ್ರೆಸ್ನ ಹಲವು ಸಿದ್ಧಾಂತಗಳನ್ನು ನಾವು ಒಪ್ಪುವುದಿಲ್ಲವಾದರೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡುತ್ತೇವೆ ಎಂದು ಮಾಯಾವತಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈಗ ಮಧ್ಯಪ್ರದೇಶದಲ್ಲಿ ಬೆಂಬಲ ನೀಡುತ್ತಿದ್ದು, ಅಗತ್ಯಬಿದ್ದರೆ ರಾಜಸ್ಥಾನದಲ್ಲೂ ಬೆಂಬಲ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ಗೆ ಬೆಂಬಲ ನೀಡುತ್ತೇವೆ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ.
ಛತ್ತೀಸಗಡ, ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಜನರು ಬಿಜೆಪಿಗೆ ವಿರುದ್ಧವಾಗಿ ಮತನೀಡಿದ್ದಾರೆ ಎಂಬುದನ್ನು ಫಲಿತಾಂಶವೇ ತೋರಿದೆ. ಇತರ ಪರ್ಯಾಯಗಳ ಇಲ್ಲದಿರುವುದರಿಂದ ಕಾಂಗ್ರೆಸ್ ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
#WATCH: "To keep BJP out of power we have agreed to support Congress in Madhya Pradesh and if need be in Rajasthan, even though we don't agree with many of their policies,"says Mayawati, BSP #AssemblyElections2018 pic.twitter.com/1gr6RFRZHO
— ANI (@ANI) December 12, 2018
ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್ಗೆ ಸಮಾಜವಾದಿ ಪಾರ್ಟಿ(ಎಸ್ಪಿ) ಬೆಂಬಲ ನೀಡಲಿದೆ ಎಂದು ಪಕ್ಷದ ಮುಖಂಡ ಅಖಿಲೇಶ್ ಯಾದವ್ ತಿಳಿಸಿದ್ದಾರೆ. ಎಸ್ಪಿ ಒಂದು ಸ್ಥಾನದಲ್ಲಿ ಜಯಗಳಿಸಿದೆ.
Akhilesh Yadav: Samajwadi Party will support Congress in forming the government in Madhya Pradesh (file pic) #MadhyaPradeshElections2018 pic.twitter.com/mOyjHwwfpd
— ANI (@ANI) December 12, 2018
230 ಸಂಖ್ಯಾಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ 116 ಸ್ಥಾನಗಳ ಅಗತ್ಯವಿದೆ. ಕಾಂಗ್ರೆಸ್ 114 ಸ್ಥಾನ ಗಳಿಸಿದ್ದು, ಎರಡು ಸ್ಥಾನಗಳ ಕೊರತೆ ಇದೆ. ಬಿಎಸ್ಪಿ ಎರಡು ಸ್ಥಾನಗಳಲ್ಲಿ ಜಯಗಳಿಸಿದೆ. ಬಿಜೆಪಿ 109 ಸ್ಥಾನಗಳನ್ನಷ್ಟೇ ಗಳಿಸಿದೆ. ಎಸ್ಪಿ 1, ಇತರರು 4 ಸ್ಥಾನಗಳಲ್ಲಿ ಗೆಲುವು ಪಡೆದಿದ್ದಾರೆ.
ಮಧ್ಯಪ್ರದೇಶದ ಚುನಾವಣೆ ಫಲಿತಾಂಶ ಮಂಗಳವಾರ ತಡರಾತ್ರಿವರೆಗೂ ಅಂತಿಮಗೊಂಡಿರಲಿಲ್ಲ. ಚುನಾವಣಾ ಆಯೋಗ ಬುಧವಾರ ಪೂರ್ಣ ಫಲಿತಾಂಶವನ್ನು ಪ್ರಕಟಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.