ಕಾಂಗ್ರೆಸ್ನವರು ತಪ್ಪು ಗ್ರಹಿಕೆಯಿಂದ ಬಿಜೆಪಿಯನ್ನು ಸೋಲಿಸುತ್ತೇವೆ ಎಂಬ ಜಂಬದ ಮಾತುಗಳನ್ನು ಹೇಳುತ್ತಿದ್ದಾರೆ. ಆದರೆ ವಾಸ್ತವ ಚಿತ್ರಣವೇ ಬೇರೆ ಇದೆ, ಕಾಂಗ್ರೆಸ್ ಪಕ್ಷದ ತಪ್ಪುಗಳು ಮತ್ತು ಅವರ ಭ್ರಷ್ಟಾಚಾರವನ್ನು ಜನರು ಮರೆತಿಲ್ಲ, ಅವರು ತಮ್ಮ ತಪ್ಪನ್ನು ತಿದ್ದಿಕೊಳ್ಳಲು ತಯಾರಿಲ್ಲ ಎಂದು ಮಾಯಾವತಿ ಎಎನ್ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.