ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಬಜೆಟ್ ಅಧಿವೇಶನ ದಿನಾಂಕದ ಬಗ್ಗೆ ಚರ್ಚಿಸಲಾಯಿತು ಎಂದು ಸರ್ಕಾರದ ಮೂಲಗಳು ಬುಧವಾರ ತಿಳಿಸಿವೆ.ರಾಷ್ಟ್ರಪತಿ ಜ.31ರಂದು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅದೇ ದಿನ ಆರ್ಥಿಕ ಸಮೀಕ್ಷೆಯ ವರದಿಯೂ ಮಂಡನೆಯಾಗಲಿದೆ.