ಬುಲಂದ್ಶಹರ್: ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಕಲ್ಲುಹಾಸಿನ ಮೇಲೆ ಮಲಗಿದ್ದ ವೈಷ್ಣೋದೇವಿ ಯಾತ್ರಾರ್ಥಿಗಳ ಮೇಲೆ ಬಸ್ ಹರಿದು ಏಳು ಮಂದಿ ಸಾವಿಗೀಡಾಗಿದ್ದಾರೆ. ಗಂಗಾ ನದಿ ತೀರದ ಬಳಿ ಶುಕ್ರವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ನಾಲ್ಕು ಮಹಿಳೆಯರು ಮತ್ತು ಮೂವರು ಬಾಲಕಿಯರು ಪ್ರಾಣ ಕಳೆದುಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿರುವ ಮಾತಾ ವೈಷ್ಣೋದೇವಿ ದರ್ಶನ ಮುಗಿಸಿ ಹತರಸ್ ಜನ್ಪದ್ಗೆ ಮರಳಿ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.