ಜೀತು ಅವರು ಪಿಸ್ತೂಲ್ನಿಂದ ಗುಂಡು ಹಾರಿಸುವ ದೃಶ್ಯಗಳು ವಿಡಿಯೊದಲ್ಲಿ ದಾಖಲಾಗಿವೆ. ಈ ವಿಡಿಯೊ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಹಿಂಸಾಚಾರದ ನಂತರ ಜೀತು ಅವರು ತಕ್ಷಣವೇ ಜಮ್ಮು ಮತ್ತು ಕಾಶ್ಮೀರಕ್ಕೆ ಪರಾರಿಯಾಗಿದ್ದಾರೆ. ಅವರನ್ನು ಬಂಧಿಸಲು ಪೊಲೀಸರ ಎರಡು ತಂಡಗಳು ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿವೆ. ‘ಸುಬೋಧ್ ಅವರ ಸಾವಿಗೆ ಕಾರಣವಾದ ಗುಂಡು ಹೊಡೆದವರು ಜೀತು ಎಂಬಂತೆ ಕಾಣಿಸುತ್ತಿದೆ. ಆದರೆ, ವಿಡಿಯೊ ದೃಶ್ಯಗಳ ಸಮಗ್ರ ತನಿಖೆಯ ಬಳಿಕವಷ್ಟೇ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಬಹುದು’ ಎಂದು ಬುಲಂದ್ಶಹರ್ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.