ಲಖನೌ: ಗೋರಖಪುರ ಜಿಲ್ಲಾಧಿಕಾರಿ ಸೇರಿದಂತೆ 37 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.
‘ವರ್ಗಾವಣೆಗೊಂಡಿರುವ ಅಧಿಕಾರಿಗಳಲ್ಲಿ 16 ಮಂದಿ ಜಿಲ್ಲಾಧಿಕಾರಿಗಳಾಗಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ಗೋರಖಪುರದ ಜಿಲ್ಲಾಧಿಕಾರಿ ರಾಜೀವ್ ರೌಟೇಲಾ ಅವರನ್ನು ದೇವಿಪಟಾನ್ನ ವಿಭಾಗೀಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಗೋರಖಪುರಕ್ಕೆ ಕೆ. ವಿಜಯೇಂದ್ರ ಪಾಂಡಿಯನ್ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.
ವಾಣಿಜ್ಯ ಮತ್ತು ಮನೋರಂಜನಾ ತೆರಿಗೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅಲೋಕ್ ಸಿನ್ಹಾ ಅವರನ್ನು ನೇಮಕ ಮಾಡಲಾಗಿದೆ.