‘ಸೋಮವಾರದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ ಆಗಲಿದೆ. ಅನರ್ಹತೆ ಆದೇಶದ ಸಿಂಧುತ್ವ ಪ್ರಶ್ನಿಸಿ ನಾವು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಲಾಗಿದೆ. ಮುಂದಿನ ಸೋಮವಾರ ಮತ್ತು ಮಂಗಳವಾರ ಕೋರ್ಟ್ಗೆ ರಜೆ ಇರುವ ಕಾರಣ ತೀರ್ಪು ವಿಳಂಬವಾದರೆ, ನಾಮಪತ್ರ ಸಲ್ಲಿಕೆಗೂ ಅವಕಾಶ ದೊರೆಯದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿದರು.