<p><strong>ಲಖನೌ (ಪಿಟಿಐ): </strong>ಉತ್ತರಪ್ರದೇಶದಲ್ಲಿ ಎಸ್ಪಿ– ಬಿಎಸ್ಪಿ ನಡುವಿನ ಮೈತ್ರಿ ಮುರಿದುಬಿದ್ದಿದೆ. ಇದರಿಂದಾಗಿ ರಾಜ್ಯದ 12 ವಿಧಾನಸಭಾ ಕ್ಷೇತ್ರಗಳಿಗೆ ಸದ್ಯದಲ್ಲೇ ನಡೆಯಲಿರುವ ಉಪ ಚುನಾವಣೆಯಲ್ಲಿ ಚತುಷ್ಕೋನ ಸ್ಪರ್ಧೆ ಉಂಟಾಗುವುದು ನಿಚ್ಚಳವಾಗಿದೆ.</p>.<p>11 ಮಂದಿ ಶಾಸಕರು ಈಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದರಿಂದ ಆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಾಗಿದೆ. ಹಮೀರ್ಪುರ್ ಕ್ಷೇತ್ರದ ಬಿಜೆಪಿ ಶಾಸಕ ಅಶೋಕ್ ಕುಮಾರ್ ಸಿಂಗ್ ಚಂಡೆಲ್ ಅವರ ವಿರುದ್ಧದ ಕೊಲೆ ಆರೋಪ ಸಾಬೀತಾಗಿ ಅವರಿಗೆ ಜೀವಾವಧಿ ಶಿಕ್ಷೆ ಘೋಷಣೆಯಾಗಿರುವುದರಿಂದ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ. ಆ ಕ್ಷೇತ್ರಕ್ಕೂ ಚುನಾವಣೆ ನಡೆಯಲಿದೆ.</p>.<p>2017ರಲ್ಲಿ ನಡೆದ ವಿಧಾನಸಭಾ ಚುನಾವಣೆ ಮತ್ತು ಆ ನಂತರ 2019ರಲ್ಲಿ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ಎಸ್ಪಿ, ಬಿಎಸ್ಪಿ ಹಾಗೂ ಆರ್ಎಲ್ಡಿ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು.</p>.<p>ಮುಂಬರುವ ಉಪಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಬಿಜೆಪಿ ಉತ್ತರಪ್ರದೇಶ ಘಟಕದ ಮಾಧ್ಯಮ ಸಂಯೋಜಕ ರಾಕೇಶ್ ತ್ರಿಪಾಠಿ ಅವರು, ‘ಸ್ಪರ್ಧೆ ಚತುಷ್ಕೋನವಾಗಿರಲಿ ಬಹುಕೋನದ್ದಾಗಿರಲಿ, ಬಿಜೆಪಿ ಗೆಲ್ಲುವುದು ಖಚಿತ. ಹಿಂದಿನ ಉಪಚುನಾವಣೆಗಳಲ್ಲಿ ಆಗಿರುವ ಸೋಲಿನಿಂದ ನಾವು ಪಾಠ ಕಲಿತಿದ್ದೇವೆ’ ಎಂದಿದ್ದಾರೆ.</p>.<p>ಆದರೆ, ‘ಬಿಜೆಪಿ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಮುಂದಿನ ಉಪಚುನಾವಣೆಯಲ್ಲಿ ಅನಿರೀಕ್ಷಿತ ಫಲಿತಾಂಶ ಬರಲಿದೆ’ ಎಂದು ಕಾಂಗ್ರೆಸ್ನ ವಕ್ತಾರ ಅಶೋಕ್ ಸಿಂಗ್ ಹೇಳಿದ್ದಾರೆ. ‘ನಮ್ಮ ಎಲ್ಲಾ ಶ್ರಮವನ್ನು ಹಾಕಿ ಚುನಾವಣೆಗೆ ಇಳಿಯುತ್ತೇವೆ. ಫಲಿತಾಂಶವು ಉತ್ತರಪ್ರದೇಶ ವಿಧಾನಸಭೆಯ ಚಿತ್ರಣವನ್ನು ಬದಲಿಸಲಿದೆ’ ಎಂದು ಸಿಂಗ್ ಭರವಸೆ ವ್ಯಕ್ತಪಡಿಸಿದ್ದಾರೆ.</p>.<p>‘ ಉಪಚುನಾವಣೆಯ ಉಸ್ತುವಾರಿಯನ್ನು ನೋಡಿಕೊಳ್ಳಲು ಕಾಂಗ್ರೆಸ್ ಪಕ್ಷವು ಇಬ್ಬರು ಸದಸ್ಯರ ತಂಡವನ್ನು ರಾಜ್ಯಕ್ಕೆ ಕಳುಹಿಸಲು ನಿರ್ಧರಿಸಿದೆ. ಪಕ್ಷದಲ್ಲಿ ಸಂಘಟನಾತ್ಮಕ ಬದಲಾವಣೆಗಳನ್ನು ಮಾಡುವ ಹೊಣೆಯನ್ನು ಮುಖಂಡ ಅಜಯ್ಕುಮಾರ್ ಲಲ್ಲು ಅವರಿಗೆ ವಹಿಸಲಾಗಿದೆ. ಇನ್ನು ಮುಂದೆ ಎಲ್ಲಾ ಚುನಾವಣೆಗಳಲ್ಲೂ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ<br />ಬಿಎಸ್ಪಿ ನಾಯಕಿ ಮಾಯಾವತಿ ಅವರು ಘೋಷಿಸಿರುವುದರಿಂದ ಈ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಕಾಂಗ್ರೆಸ್ಗೆ ಅನಿವಾರ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ (ಪಿಟಿಐ): </strong>ಉತ್ತರಪ್ರದೇಶದಲ್ಲಿ ಎಸ್ಪಿ– ಬಿಎಸ್ಪಿ ನಡುವಿನ ಮೈತ್ರಿ ಮುರಿದುಬಿದ್ದಿದೆ. ಇದರಿಂದಾಗಿ ರಾಜ್ಯದ 12 ವಿಧಾನಸಭಾ ಕ್ಷೇತ್ರಗಳಿಗೆ ಸದ್ಯದಲ್ಲೇ ನಡೆಯಲಿರುವ ಉಪ ಚುನಾವಣೆಯಲ್ಲಿ ಚತುಷ್ಕೋನ ಸ್ಪರ್ಧೆ ಉಂಟಾಗುವುದು ನಿಚ್ಚಳವಾಗಿದೆ.</p>.<p>11 ಮಂದಿ ಶಾಸಕರು ಈಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದರಿಂದ ಆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಾಗಿದೆ. ಹಮೀರ್ಪುರ್ ಕ್ಷೇತ್ರದ ಬಿಜೆಪಿ ಶಾಸಕ ಅಶೋಕ್ ಕುಮಾರ್ ಸಿಂಗ್ ಚಂಡೆಲ್ ಅವರ ವಿರುದ್ಧದ ಕೊಲೆ ಆರೋಪ ಸಾಬೀತಾಗಿ ಅವರಿಗೆ ಜೀವಾವಧಿ ಶಿಕ್ಷೆ ಘೋಷಣೆಯಾಗಿರುವುದರಿಂದ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ. ಆ ಕ್ಷೇತ್ರಕ್ಕೂ ಚುನಾವಣೆ ನಡೆಯಲಿದೆ.</p>.<p>2017ರಲ್ಲಿ ನಡೆದ ವಿಧಾನಸಭಾ ಚುನಾವಣೆ ಮತ್ತು ಆ ನಂತರ 2019ರಲ್ಲಿ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ಎಸ್ಪಿ, ಬಿಎಸ್ಪಿ ಹಾಗೂ ಆರ್ಎಲ್ಡಿ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು.</p>.<p>ಮುಂಬರುವ ಉಪಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಬಿಜೆಪಿ ಉತ್ತರಪ್ರದೇಶ ಘಟಕದ ಮಾಧ್ಯಮ ಸಂಯೋಜಕ ರಾಕೇಶ್ ತ್ರಿಪಾಠಿ ಅವರು, ‘ಸ್ಪರ್ಧೆ ಚತುಷ್ಕೋನವಾಗಿರಲಿ ಬಹುಕೋನದ್ದಾಗಿರಲಿ, ಬಿಜೆಪಿ ಗೆಲ್ಲುವುದು ಖಚಿತ. ಹಿಂದಿನ ಉಪಚುನಾವಣೆಗಳಲ್ಲಿ ಆಗಿರುವ ಸೋಲಿನಿಂದ ನಾವು ಪಾಠ ಕಲಿತಿದ್ದೇವೆ’ ಎಂದಿದ್ದಾರೆ.</p>.<p>ಆದರೆ, ‘ಬಿಜೆಪಿ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಮುಂದಿನ ಉಪಚುನಾವಣೆಯಲ್ಲಿ ಅನಿರೀಕ್ಷಿತ ಫಲಿತಾಂಶ ಬರಲಿದೆ’ ಎಂದು ಕಾಂಗ್ರೆಸ್ನ ವಕ್ತಾರ ಅಶೋಕ್ ಸಿಂಗ್ ಹೇಳಿದ್ದಾರೆ. ‘ನಮ್ಮ ಎಲ್ಲಾ ಶ್ರಮವನ್ನು ಹಾಕಿ ಚುನಾವಣೆಗೆ ಇಳಿಯುತ್ತೇವೆ. ಫಲಿತಾಂಶವು ಉತ್ತರಪ್ರದೇಶ ವಿಧಾನಸಭೆಯ ಚಿತ್ರಣವನ್ನು ಬದಲಿಸಲಿದೆ’ ಎಂದು ಸಿಂಗ್ ಭರವಸೆ ವ್ಯಕ್ತಪಡಿಸಿದ್ದಾರೆ.</p>.<p>‘ ಉಪಚುನಾವಣೆಯ ಉಸ್ತುವಾರಿಯನ್ನು ನೋಡಿಕೊಳ್ಳಲು ಕಾಂಗ್ರೆಸ್ ಪಕ್ಷವು ಇಬ್ಬರು ಸದಸ್ಯರ ತಂಡವನ್ನು ರಾಜ್ಯಕ್ಕೆ ಕಳುಹಿಸಲು ನಿರ್ಧರಿಸಿದೆ. ಪಕ್ಷದಲ್ಲಿ ಸಂಘಟನಾತ್ಮಕ ಬದಲಾವಣೆಗಳನ್ನು ಮಾಡುವ ಹೊಣೆಯನ್ನು ಮುಖಂಡ ಅಜಯ್ಕುಮಾರ್ ಲಲ್ಲು ಅವರಿಗೆ ವಹಿಸಲಾಗಿದೆ. ಇನ್ನು ಮುಂದೆ ಎಲ್ಲಾ ಚುನಾವಣೆಗಳಲ್ಲೂ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ<br />ಬಿಎಸ್ಪಿ ನಾಯಕಿ ಮಾಯಾವತಿ ಅವರು ಘೋಷಿಸಿರುವುದರಿಂದ ಈ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಕಾಂಗ್ರೆಸ್ಗೆ ಅನಿವಾರ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>