ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಕರೀಂನಗರ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ನಾನು ಇಲ್ಲಿದ್ದೇನೆ. ನನ್ನೊಂದಿಗೆ ಚರ್ಚಿಸಿ, ಅವರೊಂದಿಗೆ ಯಾಕೆ ಚರ್ಚೆ. ಗಡ್ಡವಿರುವ ವ್ಯಕ್ತಿಯೊಂದಿಗೆ ಚರ್ಚಿಸಿ. ನಾವು ಸಿಎಎ, ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತು ಮಾತನಾಡುತ್ತೇವೆ ಮತ್ತು ಚರ್ಚಿಸುತ್ತೇವೆ’ ಎಂದು ಕುಟುಕಿದ್ದಾರೆ.