<p><strong>ಶಿಲ್ಲಾಂಗ್ (ಮೇಘಾಲಯ):</strong> ಸಿಎಎ ಪರ–ವಿರೋಧಿ ಗುಂಪುಗಳ ನಡುವೆ ಭುಗಿಲೆದ್ದ ಹಿಂಸಾಚಾರದಲ್ಲಿ ಸುಮಾರು 10 ಜನರು ಇರಿತಕ್ಕೆ ಒಳಗಾಗಿದ್ದು, ಇಬ್ಬರು ಹತ್ಯೆಯಾಗಿದ್ದಾರೆ.</p>.<p>ಶನಿವಾರ ಭುಗಿಲೆದ್ದ ಹಿಂಸಾಚಾರ ಶಿಲ್ಲಾಂಗ್ನ ಹಲವು ಪ್ರದೇಶಗಳಲ್ಲಿ ಹರಡಿದ್ದು, ನಗರದಾದ್ಯಂತ ಬಿಗುವಿನ ವಾತಾವರಣ ಮುಂದುವರೆದಿದೆ.</p>.<p>ಶಿಲ್ಲಾಂಗ್ನ ಜಯಾವ್, ಲಾಂಗ್ಸ್ನಿಂಗ್ ಮತ್ತು ಚಿರಾಪುಂಚಿ ಪಟ್ಟಣದ ಐವ್ ಸೊಹ್ರಾ ಮಾರುಕಟ್ಟೆಗಳಲ್ಲಿ ಘರ್ಷಣೆ ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘರ್ಷಣೆಗಳಲ್ಲಿ ಇಬ್ಬರು ಗಾಯಗೊಂಡಿದ್ದಾರೆ.</p>.<p>ಬಾಂಗ್ಲಾದೇಶ ಗಡಿಯ ಸಮೀಪದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಇಚಮತಿ ಪ್ರದೇಶದಲ್ಲಿ ಖಾಸಿ ವಿದ್ಯಾರ್ಥಿ ಸಂಘಟನೆ ಸದಸ್ಯರು ಮತ್ತು ಸ್ಥಳೀಯರಲ್ಲದವರ ನಡುವೆ ಘರ್ಷಣೆ ಸಂಭವಿಸಿದ ಪರಿಣಾಮ ಸ್ಥಳೀಯ ಟ್ಯಾಕ್ಸಿ ಚಾಲಕನೊಬ್ಬ ಹತ್ಯೆಯಾಗಿದ್ದಾನೆ.</p>.<p>ಘಟನೆಯ ನಂತರ ಎಂಟು ಜನರನ್ನು ಬಂಧಿಸಲಾಗಿದ್ದು, ವಿಚಾರಣೆ ಆರಂಭಿಸಲಾಗಿದೆ.</p>.<p>ಗಲಭೆ ಪೀಡಿತ ಶಿಲ್ಲಾಂಗ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಕರ್ಫ್ಯೂ ಘೋಷಿಸಲಾಗಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಈಗಾಗಲೇ ಮೇಘಾಲಯಕ್ಕೆ ಆಗಮಿಸಿದ್ದು, ಇನ್ನೂ ಆರು ತುಕಡಿಗಳು ಬರಲಿವೆ ಎಂದು ವರದಿಯಾಗಿದೆ.</p>.<p>ಮೇಘಾಲಯ ಮುಖ್ಯಮಂತ್ರಿ ಸಂಗ್ಮಾ ಅವರು,‘ಜನರು ಹಿಂಸಾಚಾರದಿಂದ ದೂರವಿರಬೇಕು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ‘ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಲ್ಲಾಂಗ್ (ಮೇಘಾಲಯ):</strong> ಸಿಎಎ ಪರ–ವಿರೋಧಿ ಗುಂಪುಗಳ ನಡುವೆ ಭುಗಿಲೆದ್ದ ಹಿಂಸಾಚಾರದಲ್ಲಿ ಸುಮಾರು 10 ಜನರು ಇರಿತಕ್ಕೆ ಒಳಗಾಗಿದ್ದು, ಇಬ್ಬರು ಹತ್ಯೆಯಾಗಿದ್ದಾರೆ.</p>.<p>ಶನಿವಾರ ಭುಗಿಲೆದ್ದ ಹಿಂಸಾಚಾರ ಶಿಲ್ಲಾಂಗ್ನ ಹಲವು ಪ್ರದೇಶಗಳಲ್ಲಿ ಹರಡಿದ್ದು, ನಗರದಾದ್ಯಂತ ಬಿಗುವಿನ ವಾತಾವರಣ ಮುಂದುವರೆದಿದೆ.</p>.<p>ಶಿಲ್ಲಾಂಗ್ನ ಜಯಾವ್, ಲಾಂಗ್ಸ್ನಿಂಗ್ ಮತ್ತು ಚಿರಾಪುಂಚಿ ಪಟ್ಟಣದ ಐವ್ ಸೊಹ್ರಾ ಮಾರುಕಟ್ಟೆಗಳಲ್ಲಿ ಘರ್ಷಣೆ ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘರ್ಷಣೆಗಳಲ್ಲಿ ಇಬ್ಬರು ಗಾಯಗೊಂಡಿದ್ದಾರೆ.</p>.<p>ಬಾಂಗ್ಲಾದೇಶ ಗಡಿಯ ಸಮೀಪದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಇಚಮತಿ ಪ್ರದೇಶದಲ್ಲಿ ಖಾಸಿ ವಿದ್ಯಾರ್ಥಿ ಸಂಘಟನೆ ಸದಸ್ಯರು ಮತ್ತು ಸ್ಥಳೀಯರಲ್ಲದವರ ನಡುವೆ ಘರ್ಷಣೆ ಸಂಭವಿಸಿದ ಪರಿಣಾಮ ಸ್ಥಳೀಯ ಟ್ಯಾಕ್ಸಿ ಚಾಲಕನೊಬ್ಬ ಹತ್ಯೆಯಾಗಿದ್ದಾನೆ.</p>.<p>ಘಟನೆಯ ನಂತರ ಎಂಟು ಜನರನ್ನು ಬಂಧಿಸಲಾಗಿದ್ದು, ವಿಚಾರಣೆ ಆರಂಭಿಸಲಾಗಿದೆ.</p>.<p>ಗಲಭೆ ಪೀಡಿತ ಶಿಲ್ಲಾಂಗ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಕರ್ಫ್ಯೂ ಘೋಷಿಸಲಾಗಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಈಗಾಗಲೇ ಮೇಘಾಲಯಕ್ಕೆ ಆಗಮಿಸಿದ್ದು, ಇನ್ನೂ ಆರು ತುಕಡಿಗಳು ಬರಲಿವೆ ಎಂದು ವರದಿಯಾಗಿದೆ.</p>.<p>ಮೇಘಾಲಯ ಮುಖ್ಯಮಂತ್ರಿ ಸಂಗ್ಮಾ ಅವರು,‘ಜನರು ಹಿಂಸಾಚಾರದಿಂದ ದೂರವಿರಬೇಕು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ‘ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>