ಕಳೆದ ಡಿಸೆಂಬರ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ದೇಶದ ವಿವಿಧೆಡೆ ನಡೆದ ಹಿಂಸಾಚಾರದ ಕುರಿತು ಮಾತನಾಡಿದ್ದ ಅವರು, ಹಿಂಸಾಚಾರ ಮತ್ತು ಗಲಭೆಯು ಯಾವುದೇ ಸಮಸ್ಯೆ ಪರಿಹಾರ ಕಂಡುಕೊಳ್ಳಲು ದಾರಿಯಾಗಿರುವುದಿಲ್ಲ. ಪರಿಹಾರ ಕಂಡುಕೊಳ್ಳಲು ಹಿಂಸಾಚಾರ ಮತ್ತು ಗಲಭೆಗಳು ದಾರಿ ಮಾಡಿಕೊಡುವುದಿಲ್ಲ. ದೇಶದ ಭದ್ರತೆ ಮತ್ತು ಕಲ್ಯಾಣವನ್ನು ಮನಸ್ಸಿನಲ್ಲಿಟ್ಟುಕೊಂಡು ಎಲ್ಲರೂ ಒಗ್ಗಟ್ಟಾಗಿರುವಂತೆ ದೇಶದ ಜನರಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದರು.