<p><strong>ನವದೆಹಲಿ:</strong>ಈಶಾನ್ಯ ದೆಹಲಿ ಜಫ್ರಾಬಾದ್ನಲ್ಲಿ ಸೋಮವಾರ ನಡೆದ ಹಿಂಸಾಚಾರದ ವೇಳೆ ಕೈಯಲ್ಲಿ ಬಂದೂಕು ಹಿಡಿದು ಪೊಲೀಸ್ ಅಧಿಕಾರಿಗೆ ಬೆದರಿಕೆಯೊಡ್ಡಿದ್ದ ಯುವಕನ ಚಿತ್ರ ಮತ್ತು ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. </p>.<p>ಸಿಎಎ ವಿರುದ್ದ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭ ಬಂದೂಕು ಪ್ರದರ್ಶಿಸಿದ ಯುವಕನನ್ನು ಶಾರುಖ್ ಎಂದು ಗುರುತಿಸಲಾಗಿದೆ.</p>.<p>ಸಿಎಎ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ಜನರ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಯುವಕ ಪೊಲೀಸ್ ಅಧಿಕಾರಿಯೊಬ್ಬರಿಗೆ ಬಂದೂಕು ತೋರಿಸಿ ಹಿಂದೆ ಸರಿಯುವಂತೆ ಬೆದರಿಕೆ ಹಾಕಿದ್ದ. ಆ ವೇಳೆ ಪೊಲೀಸ್ ಅಧಿಕಾರಿ ಯುವಕನ ಬೆದರಿಕೆಗೆ ಜಗ್ಗದೇ, ಎರಡು ಕೈ ಎತ್ತಿ ಮುಂದೆ ಬಂದಾಗ ಯುವಕ ಗಾಳಿಯಲ್ಲಿ ಗುಂಡು ಹಾರಿಸಿದ್ದನ್ನು ಪ್ರತ್ಯಕ್ಷದರ್ಶಿಗಳು ತಮ್ಮ ಮೊಬೈಲ್ನಲ್ಲಿ ಚಿತ್ರಿಕರಿಸಿಕೊಂಡಿದ್ದರು.</p>.<p>ಆ ಯುವಕನನ್ನು ಬಂಧಿಸಿರುವ ದೆಹಲಿ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.</p>.<p>ಈಶಾನ್ಯ ದೆಹಲಿಯಲ್ಲಿ ಸಿಎಎ ಪರ–ವಿರುದ್ದದ ಗುಂಪುಗಳು ನಡುವೆ ಭಾನುವಾರ ಸಂಘರ್ಷ ಉಂಟಾಗಿತ್ತು. ಸೋಮುವಾರವೂ ಮುಂದುವರೆದ ಹಿಂಸಾಚಾರದಲ್ಲಿ ಏಳು ಜನರು ಸಾವಿಗೀಡಾಗಿ, ಹಲವರು ಗಾಯಗೊಂಡಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಈಶಾನ್ಯ ದೆಹಲಿ ಜಫ್ರಾಬಾದ್ನಲ್ಲಿ ಸೋಮವಾರ ನಡೆದ ಹಿಂಸಾಚಾರದ ವೇಳೆ ಕೈಯಲ್ಲಿ ಬಂದೂಕು ಹಿಡಿದು ಪೊಲೀಸ್ ಅಧಿಕಾರಿಗೆ ಬೆದರಿಕೆಯೊಡ್ಡಿದ್ದ ಯುವಕನ ಚಿತ್ರ ಮತ್ತು ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. </p>.<p>ಸಿಎಎ ವಿರುದ್ದ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭ ಬಂದೂಕು ಪ್ರದರ್ಶಿಸಿದ ಯುವಕನನ್ನು ಶಾರುಖ್ ಎಂದು ಗುರುತಿಸಲಾಗಿದೆ.</p>.<p>ಸಿಎಎ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ಜನರ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಯುವಕ ಪೊಲೀಸ್ ಅಧಿಕಾರಿಯೊಬ್ಬರಿಗೆ ಬಂದೂಕು ತೋರಿಸಿ ಹಿಂದೆ ಸರಿಯುವಂತೆ ಬೆದರಿಕೆ ಹಾಕಿದ್ದ. ಆ ವೇಳೆ ಪೊಲೀಸ್ ಅಧಿಕಾರಿ ಯುವಕನ ಬೆದರಿಕೆಗೆ ಜಗ್ಗದೇ, ಎರಡು ಕೈ ಎತ್ತಿ ಮುಂದೆ ಬಂದಾಗ ಯುವಕ ಗಾಳಿಯಲ್ಲಿ ಗುಂಡು ಹಾರಿಸಿದ್ದನ್ನು ಪ್ರತ್ಯಕ್ಷದರ್ಶಿಗಳು ತಮ್ಮ ಮೊಬೈಲ್ನಲ್ಲಿ ಚಿತ್ರಿಕರಿಸಿಕೊಂಡಿದ್ದರು.</p>.<p>ಆ ಯುವಕನನ್ನು ಬಂಧಿಸಿರುವ ದೆಹಲಿ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.</p>.<p>ಈಶಾನ್ಯ ದೆಹಲಿಯಲ್ಲಿ ಸಿಎಎ ಪರ–ವಿರುದ್ದದ ಗುಂಪುಗಳು ನಡುವೆ ಭಾನುವಾರ ಸಂಘರ್ಷ ಉಂಟಾಗಿತ್ತು. ಸೋಮುವಾರವೂ ಮುಂದುವರೆದ ಹಿಂಸಾಚಾರದಲ್ಲಿ ಏಳು ಜನರು ಸಾವಿಗೀಡಾಗಿ, ಹಲವರು ಗಾಯಗೊಂಡಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>