<p><strong>ನವದೆಹಲಿ/ಭೋಗನಂದಿ</strong>: ಪಾಕಿಸ್ತಾನ, ಬಾಂಗ್ಲಾ ಮತ್ತು ಅಫ್ಗಾನಿಸ್ತಾನದ ಮುಸ್ಲಿಮೇತರ ಅಕ್ರಮ ವಲಸಿಗರಿಗೆ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆಯ ಜಾರಿಗೆ ಕೇಂದ್ರ ಸರ್ಕಾರವು ಬದ್ಧ. ಎಷ್ಟೇ ಪ್ರತಿಭಟನೆ ನಡೆಸಿದರೂ ಈ ಕಾಯ್ದೆ ಜಾರಿಯನ್ನು ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ದೃಢವಾಗಿ ಹೇಳಿದ್ದಾರೆ.</p>.<p>ಕಾಯ್ದೆಯ ಬಗ್ಗೆ ದೇಶದ ಜನರನ್ನು ತಪ್ಪು ದಾರಿಗೆಳೆಯಲು ವಿರೋಧ ಪಕ್ಷಗಳು ಯತ್ನಿಸುತ್ತಿವೆ. ಭಾರತದ ಯಾವುದೇ ಅಲ್ಪಸಂಖ್ಯಾತ ಸಮುದಾಯದ ಪೌರರ ಪೌರತ್ವವನ್ನು ಕಸಿದುಕೊಳ್ಳುವ ಪ್ರಶ್ನೆಯೇ ಇಲ್ಲ. ಕಾಯ್ದೆಯಲ್ಲಿ ಅಂತಹ ಅಂಶವೂ ಇಲ್ಲ ಎಂದು ಶಾ ಹೇಳಿದ್ದಾರೆ.</p>.<p>‘ಕಾಯ್ದೆಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಯಾವುದೇ ರೀತಿಯಲ್ಲಿ ಇದು ಅನ್ಯಾಯ ಮಾಡುತ್ತಿದೆ ಎಂದು ನೀವು ಭಾವಿಸಿದರೆ ಅದನ್ನು ನಮ್ಮ ಗಮನಕ್ಕೆ ತನ್ನಿ. ಮೋದಿ ಸರ್ಕಾರವು ಯಾರಿಗೂ ಅನ್ಯಾಯ ಮಾಡಲು ಬಯಸುವುದಿಲ್ಲ’ ಎಂದು ಹೇಳಿದ್ದಾರೆ.</p>.<p>ಈ ಕಾಯ್ದೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಸುಳ್ಳನ್ನು ಹರಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರೂ ಆರೋಪಿಸಿದ್ದಾರೆ. ಪಾಕಿಸ್ತಾನದ ಎಲ್ಲರಿಗೂ ಪೌರತ್ವ ನೀಡಲು ಸಿದ್ಧ ಎಂಬುದನ್ನು ಕಾಂಗ್ರೆಸ್ ಪಕ್ಷವು ಘೋಷಿಸಲಿ ಎಂದು ಅವರು ಸವಾಲು ಎಸೆದಿದ್ದಾರೆ.</p>.<p>ಜಾರ್ಖಂಡ್ನಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಮೋದಿ ಅವರು, ಕಾಯ್ದೆಯಿಂದಾಗಿ ಭಾರತೀಯರ ಪೌರತ್ವ ರದ್ದಾಗಲಿದೆ ಎಂಬ ಆತಂಕವನ್ನು ಹೋಗಲಾಡಿಸಲು ಪ್ರಯತ್ನಿಸಿದರು. ‘ಹೊಸ ಕಾಯ್ದೆಯ ಬಗ್ಗೆ ಮುಸ್ಲಿಮರಲ್ಲಿ ಭೀತಿ ಹುಟ್ಟಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ಈ ಕಾಯ್ದೆಯು ಭಾರತದ ಯಾವುದೇ ವ್ಯಕ್ತಿಯ ಪೌರತ್ವವನ್ನು ರದ್ದು ಮಾಡುವುದಿಲ್ಲ ಮತ್ತು ಭಾರತೀಯರಿಗೆ ಯಾವ ರೀತಿಯಲ್ಲಿಯೂ ತೊಂದರೆ ಆಗುವುದಿಲ್ಲ’ ಎಂದು ಅವರು ಹೇಳಿದರು.</p>.<p>***</p>.<p><strong>ಬೆಳಗಾವಿ: ಕಲ್ಲು ತೂರಾಟ</strong></p>.<p>ಬೆಳಗಾವಿ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಮಂಗಳವಾರ ಜಮಿಯತ್ ಉಲೇಮಾ–ಎ–ಹಿಂದ್ ಸಂಘಟನೆ ನೇತೃತ್ವದಲ್ಲಿ ಮುಸ್ಲಿಮರು ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಬಳಿಕ, ಇಲ್ಲಿನ ಶಿವಾಜಿನಗರದ ಆರ್ಟಿಒ ವೃತ್ತದಲ್ಲಿ ಕಿಡಿಗೇಡಿಗಳು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.</p>.<p>ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಏಳು ಬಸ್, ಕಾರು, ಪೆಟ್ರೋಲ್ ತುಂಬಿದ ಟ್ಯಾಂಕರ್ ಹಾಗೂ ಎಟಿಎಂ ಕೇಂದ್ರದ ಮೇಲೆ ಕಲ್ಲು ತೂರಾಟದಿಂದಾಗಿ, ವಾಹನಗಳ ಗಾಜುಗಳು ಪುಡಿಪುಡಿಯಾಗಿವೆ. ಎಟಿಎಂ ಬಾಗಿಲಿನ ಗಾಜು ಜಖಂಗೊಂಡಿದೆ. ಇಬ್ಬರು ಗಾಯಗೊಂಡಿದ್ದಾರೆ.</p>.<p>***</p>.<p><strong>ರಾಷ್ಟ್ರಪತಿಗೆ ಮನವಿ</strong></p>.<p>ದೆಹಲಿಯ ಸೀಲಾಂಪುರದಲ್ಲಿ ಮಂಗಳವಾರ ಸಂಜೆ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದೆ. 12 ಪೊಲೀಸರು ಸೇರಿ 21 ಮಂದಿ ಗಾಯಗೊಂಡಿದ್ದಾರೆ</p>.<p>ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ನಿಯೋಗ ಭೇಟಿಯಾಗಿದೆ. ‘ಅಸಾಂವಿಧಾನಿಕ ಮತ್ತು ವಿಭಜನಕಾರಿಯಾದ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಹಿಂದಕ್ಕೆ ಪಡೆಯಲು ಸರ್ಕಾರಕ್ಕೆ ಸೂಚಿಸಬೇಕು ಎಂದು ಕೋರಿದೆ.</p>.<p>*****</p>.<p>ಕಾಯ್ದೆಯನ್ನು ಜಾರಿ ಮಾಡಲು ಮೋದಿ ನೇತೃತ್ವದ ಸರ್ಕಾರ ಬದ್ಧವಾಗಿದೆ. ನಿರಾಶ್ರಿತರು ಗೌರವದಿಂದ ಬಾಳುವಂತೆ ಅವರಿಗೆ ಪೌರತ್ವ ನೀಡುತ್ತೇವೆ</p>.<p><strong>-ಅಮಿತ್ ಶಾ ಕೇಂದ್ರ ಗೃಹ ಸಚಿವ</strong></p>.<p>ವಿ.ವಿ.ಗಳು ಮುಕ್ತ ಅಭಿವ್ಯಕ್ತಿ ಮತ್ತು ಚಿಂತನೆಯನ್ನು ಪೋಷಿಸುವ ಕೇಂದ್ರಗಳಾಗುವುದನ್ನು ಖಾತರಿಪಡಿಸುವುದು ನಿಮ್ಮ (ಕುಲಪತಿಗಳು) ಅತಿ ಮುಖ್ಯ ಕರ್ತವ್ಯ<br />-<strong>ರಾಮನಾಥ ಕೋವಿಂದ್, ರಾಷ್ಟ್ರಪತಿ (ಕುಲಪತಿಗಳ ಸಮಾವೇಶದಲ್ಲಿ)</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಭೋಗನಂದಿ</strong>: ಪಾಕಿಸ್ತಾನ, ಬಾಂಗ್ಲಾ ಮತ್ತು ಅಫ್ಗಾನಿಸ್ತಾನದ ಮುಸ್ಲಿಮೇತರ ಅಕ್ರಮ ವಲಸಿಗರಿಗೆ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆಯ ಜಾರಿಗೆ ಕೇಂದ್ರ ಸರ್ಕಾರವು ಬದ್ಧ. ಎಷ್ಟೇ ಪ್ರತಿಭಟನೆ ನಡೆಸಿದರೂ ಈ ಕಾಯ್ದೆ ಜಾರಿಯನ್ನು ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ದೃಢವಾಗಿ ಹೇಳಿದ್ದಾರೆ.</p>.<p>ಕಾಯ್ದೆಯ ಬಗ್ಗೆ ದೇಶದ ಜನರನ್ನು ತಪ್ಪು ದಾರಿಗೆಳೆಯಲು ವಿರೋಧ ಪಕ್ಷಗಳು ಯತ್ನಿಸುತ್ತಿವೆ. ಭಾರತದ ಯಾವುದೇ ಅಲ್ಪಸಂಖ್ಯಾತ ಸಮುದಾಯದ ಪೌರರ ಪೌರತ್ವವನ್ನು ಕಸಿದುಕೊಳ್ಳುವ ಪ್ರಶ್ನೆಯೇ ಇಲ್ಲ. ಕಾಯ್ದೆಯಲ್ಲಿ ಅಂತಹ ಅಂಶವೂ ಇಲ್ಲ ಎಂದು ಶಾ ಹೇಳಿದ್ದಾರೆ.</p>.<p>‘ಕಾಯ್ದೆಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಯಾವುದೇ ರೀತಿಯಲ್ಲಿ ಇದು ಅನ್ಯಾಯ ಮಾಡುತ್ತಿದೆ ಎಂದು ನೀವು ಭಾವಿಸಿದರೆ ಅದನ್ನು ನಮ್ಮ ಗಮನಕ್ಕೆ ತನ್ನಿ. ಮೋದಿ ಸರ್ಕಾರವು ಯಾರಿಗೂ ಅನ್ಯಾಯ ಮಾಡಲು ಬಯಸುವುದಿಲ್ಲ’ ಎಂದು ಹೇಳಿದ್ದಾರೆ.</p>.<p>ಈ ಕಾಯ್ದೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಸುಳ್ಳನ್ನು ಹರಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರೂ ಆರೋಪಿಸಿದ್ದಾರೆ. ಪಾಕಿಸ್ತಾನದ ಎಲ್ಲರಿಗೂ ಪೌರತ್ವ ನೀಡಲು ಸಿದ್ಧ ಎಂಬುದನ್ನು ಕಾಂಗ್ರೆಸ್ ಪಕ್ಷವು ಘೋಷಿಸಲಿ ಎಂದು ಅವರು ಸವಾಲು ಎಸೆದಿದ್ದಾರೆ.</p>.<p>ಜಾರ್ಖಂಡ್ನಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಮೋದಿ ಅವರು, ಕಾಯ್ದೆಯಿಂದಾಗಿ ಭಾರತೀಯರ ಪೌರತ್ವ ರದ್ದಾಗಲಿದೆ ಎಂಬ ಆತಂಕವನ್ನು ಹೋಗಲಾಡಿಸಲು ಪ್ರಯತ್ನಿಸಿದರು. ‘ಹೊಸ ಕಾಯ್ದೆಯ ಬಗ್ಗೆ ಮುಸ್ಲಿಮರಲ್ಲಿ ಭೀತಿ ಹುಟ್ಟಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ಈ ಕಾಯ್ದೆಯು ಭಾರತದ ಯಾವುದೇ ವ್ಯಕ್ತಿಯ ಪೌರತ್ವವನ್ನು ರದ್ದು ಮಾಡುವುದಿಲ್ಲ ಮತ್ತು ಭಾರತೀಯರಿಗೆ ಯಾವ ರೀತಿಯಲ್ಲಿಯೂ ತೊಂದರೆ ಆಗುವುದಿಲ್ಲ’ ಎಂದು ಅವರು ಹೇಳಿದರು.</p>.<p>***</p>.<p><strong>ಬೆಳಗಾವಿ: ಕಲ್ಲು ತೂರಾಟ</strong></p>.<p>ಬೆಳಗಾವಿ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಮಂಗಳವಾರ ಜಮಿಯತ್ ಉಲೇಮಾ–ಎ–ಹಿಂದ್ ಸಂಘಟನೆ ನೇತೃತ್ವದಲ್ಲಿ ಮುಸ್ಲಿಮರು ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಬಳಿಕ, ಇಲ್ಲಿನ ಶಿವಾಜಿನಗರದ ಆರ್ಟಿಒ ವೃತ್ತದಲ್ಲಿ ಕಿಡಿಗೇಡಿಗಳು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.</p>.<p>ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಏಳು ಬಸ್, ಕಾರು, ಪೆಟ್ರೋಲ್ ತುಂಬಿದ ಟ್ಯಾಂಕರ್ ಹಾಗೂ ಎಟಿಎಂ ಕೇಂದ್ರದ ಮೇಲೆ ಕಲ್ಲು ತೂರಾಟದಿಂದಾಗಿ, ವಾಹನಗಳ ಗಾಜುಗಳು ಪುಡಿಪುಡಿಯಾಗಿವೆ. ಎಟಿಎಂ ಬಾಗಿಲಿನ ಗಾಜು ಜಖಂಗೊಂಡಿದೆ. ಇಬ್ಬರು ಗಾಯಗೊಂಡಿದ್ದಾರೆ.</p>.<p>***</p>.<p><strong>ರಾಷ್ಟ್ರಪತಿಗೆ ಮನವಿ</strong></p>.<p>ದೆಹಲಿಯ ಸೀಲಾಂಪುರದಲ್ಲಿ ಮಂಗಳವಾರ ಸಂಜೆ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದೆ. 12 ಪೊಲೀಸರು ಸೇರಿ 21 ಮಂದಿ ಗಾಯಗೊಂಡಿದ್ದಾರೆ</p>.<p>ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ನಿಯೋಗ ಭೇಟಿಯಾಗಿದೆ. ‘ಅಸಾಂವಿಧಾನಿಕ ಮತ್ತು ವಿಭಜನಕಾರಿಯಾದ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಹಿಂದಕ್ಕೆ ಪಡೆಯಲು ಸರ್ಕಾರಕ್ಕೆ ಸೂಚಿಸಬೇಕು ಎಂದು ಕೋರಿದೆ.</p>.<p>*****</p>.<p>ಕಾಯ್ದೆಯನ್ನು ಜಾರಿ ಮಾಡಲು ಮೋದಿ ನೇತೃತ್ವದ ಸರ್ಕಾರ ಬದ್ಧವಾಗಿದೆ. ನಿರಾಶ್ರಿತರು ಗೌರವದಿಂದ ಬಾಳುವಂತೆ ಅವರಿಗೆ ಪೌರತ್ವ ನೀಡುತ್ತೇವೆ</p>.<p><strong>-ಅಮಿತ್ ಶಾ ಕೇಂದ್ರ ಗೃಹ ಸಚಿವ</strong></p>.<p>ವಿ.ವಿ.ಗಳು ಮುಕ್ತ ಅಭಿವ್ಯಕ್ತಿ ಮತ್ತು ಚಿಂತನೆಯನ್ನು ಪೋಷಿಸುವ ಕೇಂದ್ರಗಳಾಗುವುದನ್ನು ಖಾತರಿಪಡಿಸುವುದು ನಿಮ್ಮ (ಕುಲಪತಿಗಳು) ಅತಿ ಮುಖ್ಯ ಕರ್ತವ್ಯ<br />-<strong>ರಾಮನಾಥ ಕೋವಿಂದ್, ರಾಷ್ಟ್ರಪತಿ (ಕುಲಪತಿಗಳ ಸಮಾವೇಶದಲ್ಲಿ)</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>