ಖಜೂರಿ ಖಾಸ್ ಪ್ರದೇಶದಲ್ಲಿ ಅವರ ಮನೆಯಿದ್ದು, ಮಂಗಳವಾರ ಸಂಜೆಯಿಂದ ಅವರು ನಾಪತ್ತೆಯಾಗಿರುವುದಾಗಿ ಕುಟುಂಬಿಕರು ಹೇಳಿದ್ದರು. ಬುಧವಾರ ಮಧ್ಯಾಹ್ನ ಅವರ ಶವ ದೊರೆತಿದೆ. ಜನರ ಗುಂಪೊಂದು ತಮ್ಮ ಮನೆಯಿರುವ ಬೀದಿಗೆ ಧಾವಿಸಿ ಬಂದು ಕಲ್ಲು ತೂರಾಟ ನಡೆಸಲಾರಂಭಿಸಿದ್ದರು. ಮನೆಯವರು ಅಂಕಿತ್ಗೆ ಕರೆ ಮಾಡಿ, ರಕ್ಷಣೆಗಾಗಿ ತಕ್ಷಣ ಬರುವಂತೆ ಹೇಳಿದ್ದರು. ಓಡೋಡಿ ಬಂದರೂ, ಮನೆಯ ಸಮೀಪ ಬಂದಾಗ ಈ ಗುಂಪು ತಡೆದು ನಿಲ್ಲಿಸಿತು. ಅಂಕಿತ್ಗೆ ಥಳಿಸಿದ ಈ ಗುಂಪು ಅವರನ್ನು ಎಳೆದೊಯ್ದಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.