ಕಾನ್ಪುರ ಜಿಲ್ಲಾಧಿಕಾರಿ ಆಂಜನೇಯ ಕುಮಾರ್ ಸಿಂಗ್, ‘ಡಿಸೆಂಬರ್ 21ರಂದು ನಡೆದ ಪ್ರತಿಭಟನೆಯಲ್ಲಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರನ್ನು ಸಿ.ಸಿ.ಟಿ.ವಿ ದೃಶ್ಯಾವಳಿಗಳ ಮೂಲಕ ಗುರುತಿಸಲಾಗಿದ್ದು, ಅವರ ಹೆಸರುಗಳನ್ನು ಪೊಲೀಸರಿಗೆ ಕಳುಹಿಸಲಾಗಿದೆ. ಹಾನಿಯ ಮೌಲ್ಯಮಾಪನ ಮಾಡಿ, 28 ಮಂದಿಗೆ ನೋಟಿಸ್ ನೀಡಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.