'ಪೌರತ್ವ (ತಿದ್ದುಪಡಿ) ಕಾಯ್ದೆಯು ಯಾರ ಹಕ್ಕುಗಳನ್ನೂ ಕಸಿದುಕೊಳ್ಳುವುದಿಲ್ಲ ಬದಲಿಗೆ, ಪೌರತ್ವ ನೀಡುವುದಾಗಿದೆ’ ಎಂದು ಪುನರುಚ್ಚರಿಸಿದ ಪ್ರಧಾನಿ, ‘ತಮ್ಮ ಲಾಭಕ್ಕಾಗಿ ಕೆಲ ರಾಜಕೀಯ ಪಕ್ಷಗಳು ಕಾಯ್ದೆ ಕುರಿತು ಯುವಜನರ ಒಂದು ವರ್ಗಕ್ಕೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿವೆ.ಭಾರತ ಮತ್ತು ಅದರ ಸಂವಿಧಾನದಲ್ಲಿ ನಂಬಿಕೆ ಹೊಂದಿರುವ ವಿಶ್ವದ ಯಾವುದೇ ದೇಶದ, ಯಾವುದೇ ಧರ್ಮದ ವ್ಯಕ್ತಿಯು ಸರಿಯಾದ ಪ್ರಕ್ರಿಯೆಯ ಮೂಲಕ ಭಾರತ ಪೌರತ್ವಕ್ಕೆ ಅರ್ಜಿ ಸಲ್ಲಿಸಬಹುದು ಎಂಬುದನ್ನು ನಾವೆಲ್ಲರೂ ಅರಿತಿರಬೇಕು’ಎಂದರು.