ನವದೆಹಲಿ:ಪೌರತ್ವತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ಮುಂದುವರಿದಿರುವ ಕಾರಣ ಗೃಹ ಸಚಿವ ಅಮಿತ್ ಶಾ, ಶಿಲ್ಲಾಂಗ್, ಮೇಘಾಲಯ ಭೇಟಿ ರದ್ದು ಮಾಡಿದ್ದಾರೆ.
ಭಾನುವಾರ ಶಿಲ್ಲಾಂಗ್ನಲ್ಲಿರುವ ಈಶಾನ್ಯ ಪೊಲೀಸ್ ಅಕಾಡೆಮಿಗೆ ಮತ್ತು ಸೋಮವಾರ ತವಾಂಗ್ಗೆ ಅಮಿತ್ ಶಾ ಭೇಟಿ ನಿಗದಿಯಾಗಿತ್ತು. ಆದರೆ ಇಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದಿರುವುದರಿಂದ ಭೇಟಿಯನ್ನು ರದ್ದು ಮಾಡಲಾಗಿದೆ.