<p><strong>ನವದೆಹಲಿ</strong>: ಕೃಷಿಕರಿಗೆ ವಾರ್ಷಿಕ ₹ 6000 ಆರ್ಥಿಕ ನೆರವು ನೀಡುವಪ್ರಧಾನಮಂತ್ರಿ ಕಿಸಾನ್ ಯೋಜನೆಯನ್ನು ಎಲ್ಲ ರೈತರಿಗೆ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.</p>.<p>ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೇರಿದ್ದ ಮೊದಲ ಸಂಪುಟ ಸಭೆ ಈ ನಿರ್ಧಾರವನ್ನು ತೆಗೆದುಕೊಂಡಿತು. ಬೊಕ್ಕಸಕ್ಕೆ ಇದರಿಂದ ₹ 87,000 ಕೋಟಿ ಹೊರೆ ಆಗಲಿದೆ.</p>.<p>ಜೊತೆಗೆ, ಸುಮಾರು ಐದು ಕೋಟಿ ರೈತರಿಗೆ ನೆರವಾಗುವಂತೆ ₹ 10,000 ಕೋಟಿ ಮೊತ್ತದ ಪಿಂಚಣಿ ಯೋಜನೆಗೂ ಸಂಪುಟವು ಅನುಮೋದನೆ ನೀಡಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದರು.</p>.<p>ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಚುನಾವಣಾ ಪೂರ್ವದಲ್ಲಿ ಮಂಡಿಸಿದ ಮಧ್ಯಂತರ ಬಜೆಟ್ನಲ್ಲಿ ₹ 75,000 ಕೋಟಿ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಿದ್ಧಿ (ಪಿಎಂಕೆಎಎಸ್ಎಸ್) ಯೋಜನೆಯನ್ನು ಪ್ರಕಟಿಸಿತ್ತು. ವಾರ್ಷಿಕ ₹ 6,000ವನ್ನು ಮೂರು ಕಂತುಗಳಲ್ಲಿ ವಿತರಿಸಲಿದ್ದು, ಎರಡು ಹೆಕ್ಟೇರ್ವರೆಗೆ ಭೂಮಿ ಹೊಂದಿರುವ ಸುಮಾರು 12.5 ಕೋಟಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಇದರ ಲಾಭ ದೊರೆಯಲಿದೆ ಎಂದು ಸರ್ಕಾರ ಹೇಳಿತ್ತು.</p>.<p>ಪರಿಷ್ಕೃತ ತೀರ್ಮಾನದಂತೆ ಯೋಜನೆ ವ್ಯಾಪ್ತಿಗೆ ಹೆಚ್ಚುವರಿಯಾಗಿ 2 ಕೋಟಿ ರೈತರು ಸೇರುವರು. ಬೊಕ್ಕಸಕ್ಕೆ ಹೆಚ್ಚುವರಿ ₹ 12,000 ಕೋಟಿ ಹೊರೆ ಬೀಳಲಿದೆ.ಒಟ್ಟಾರೆ 14.5 ಕೋಟಿ ರೈತರಿಗೆ ಇದರ ಲಾಭ ಸಿಗಲಿದೆ.</p>.<p>2019–20ನೇ ಹಣಕಾಸು ವರ್ಷದಲ್ಲಿ ಈ ಯೋಜನೆ ಜಾರಿಗೆ ಒಟ್ಟು ₹ 87,217.50 ಕೋಟಿ ಬೇಕಾಗಲಿದೆ ಎಂದು ಸಚಿವರು ವಿವರ ನೀಡಿದರು.</p>.<p>ಅಧಿಕೃತ ಮಾಹಿತಿ ಪ್ರಕಾರ, ಯೋಜನೆಯಡಿ ಆಗಲೇ ಸುಮಾರು 3.11 ಕೋಟಿ ಸಣ್ಣ, ಅತಿ ಸಣ್ಣ ರೈತರು ಮೊದಲ ಕಂತಿನ ₹ 2,000 ಅನ್ನು ಪಿಎಂ–ಕಿಸಾನ್ ಯೋಜನೆಯಡಿ ವಿತರಿಸಲಾಗಿದೆ. 2.75 ಕೋಟಿ ರೈತರಿಗೆ ಎರಡನೇ ಕಂತಿನ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.</p>.<p><strong>ಪಿಂಚಣಿ ಯೋಜನೆಗೂ ಅಸ್ತು:</strong> ಅಲ್ಲದೆ, ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆಗೂ ಸಂಪುಟ ಸಭೆ ಅನುಮೋದನೆ ನೀಡಿತು. 60 ವರ್ಷ ವಯಸ್ಸು ಮೀರಿದ ಸಣ್ಣ ಮತ್ತು ಅತಿ ಸಣ್ಣ ಕೃಷಿ ಹಿಡುವಳಿದಾರರಿಗೆ ಮಾಸಿಕ ₹ 3000 ಪಿಂಚಣಿ ನೀಡುವುದು ಈ ಯೋಜನೆಯ ಉದ್ದೇಶ.</p>.<p><strong>ವ್ಯಾಪಾರಿಗಳಿಗೆ ಪಿಂಚಣಿ:</strong> 60ವರ್ಷ ವಯಸ್ಸು ಮೀರಿದ ವ್ಯಾಪಾರಿಗಳಿಗೆ ಮಾಸಿಕ ₹ 3,000 ಪಿಂಚಣಿ ಖಾತರಿ ನೀಡುವ ಯೋಜನೆಗೂ ಸಂಪುಟ ಸಮ್ಮತಿ ನೀಡಿದೆ. ಇದರಿಂದ ಸುಮಾರು 3 ಕೋಟಿ ಚಿಲ್ಲರೆ ಮಾರಾಟಗಾರರು ಮತ್ತು ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.</p>.<p>‘ಮೂರು ವರ್ಷಗಳಲ್ಲಿ ಐದು ಕೋಟಿ ವ್ಯಾಪಾರಿಗಳು ಯೋಜನೆ ವ್ಯಾಪ್ತಿಗೆ ಸೇರುವ ನಿರೀಕ್ಷೆಯಿದೆ’ ಎಂದು ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೃಷಿಕರಿಗೆ ವಾರ್ಷಿಕ ₹ 6000 ಆರ್ಥಿಕ ನೆರವು ನೀಡುವಪ್ರಧಾನಮಂತ್ರಿ ಕಿಸಾನ್ ಯೋಜನೆಯನ್ನು ಎಲ್ಲ ರೈತರಿಗೆ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.</p>.<p>ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೇರಿದ್ದ ಮೊದಲ ಸಂಪುಟ ಸಭೆ ಈ ನಿರ್ಧಾರವನ್ನು ತೆಗೆದುಕೊಂಡಿತು. ಬೊಕ್ಕಸಕ್ಕೆ ಇದರಿಂದ ₹ 87,000 ಕೋಟಿ ಹೊರೆ ಆಗಲಿದೆ.</p>.<p>ಜೊತೆಗೆ, ಸುಮಾರು ಐದು ಕೋಟಿ ರೈತರಿಗೆ ನೆರವಾಗುವಂತೆ ₹ 10,000 ಕೋಟಿ ಮೊತ್ತದ ಪಿಂಚಣಿ ಯೋಜನೆಗೂ ಸಂಪುಟವು ಅನುಮೋದನೆ ನೀಡಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದರು.</p>.<p>ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಚುನಾವಣಾ ಪೂರ್ವದಲ್ಲಿ ಮಂಡಿಸಿದ ಮಧ್ಯಂತರ ಬಜೆಟ್ನಲ್ಲಿ ₹ 75,000 ಕೋಟಿ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಿದ್ಧಿ (ಪಿಎಂಕೆಎಎಸ್ಎಸ್) ಯೋಜನೆಯನ್ನು ಪ್ರಕಟಿಸಿತ್ತು. ವಾರ್ಷಿಕ ₹ 6,000ವನ್ನು ಮೂರು ಕಂತುಗಳಲ್ಲಿ ವಿತರಿಸಲಿದ್ದು, ಎರಡು ಹೆಕ್ಟೇರ್ವರೆಗೆ ಭೂಮಿ ಹೊಂದಿರುವ ಸುಮಾರು 12.5 ಕೋಟಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಇದರ ಲಾಭ ದೊರೆಯಲಿದೆ ಎಂದು ಸರ್ಕಾರ ಹೇಳಿತ್ತು.</p>.<p>ಪರಿಷ್ಕೃತ ತೀರ್ಮಾನದಂತೆ ಯೋಜನೆ ವ್ಯಾಪ್ತಿಗೆ ಹೆಚ್ಚುವರಿಯಾಗಿ 2 ಕೋಟಿ ರೈತರು ಸೇರುವರು. ಬೊಕ್ಕಸಕ್ಕೆ ಹೆಚ್ಚುವರಿ ₹ 12,000 ಕೋಟಿ ಹೊರೆ ಬೀಳಲಿದೆ.ಒಟ್ಟಾರೆ 14.5 ಕೋಟಿ ರೈತರಿಗೆ ಇದರ ಲಾಭ ಸಿಗಲಿದೆ.</p>.<p>2019–20ನೇ ಹಣಕಾಸು ವರ್ಷದಲ್ಲಿ ಈ ಯೋಜನೆ ಜಾರಿಗೆ ಒಟ್ಟು ₹ 87,217.50 ಕೋಟಿ ಬೇಕಾಗಲಿದೆ ಎಂದು ಸಚಿವರು ವಿವರ ನೀಡಿದರು.</p>.<p>ಅಧಿಕೃತ ಮಾಹಿತಿ ಪ್ರಕಾರ, ಯೋಜನೆಯಡಿ ಆಗಲೇ ಸುಮಾರು 3.11 ಕೋಟಿ ಸಣ್ಣ, ಅತಿ ಸಣ್ಣ ರೈತರು ಮೊದಲ ಕಂತಿನ ₹ 2,000 ಅನ್ನು ಪಿಎಂ–ಕಿಸಾನ್ ಯೋಜನೆಯಡಿ ವಿತರಿಸಲಾಗಿದೆ. 2.75 ಕೋಟಿ ರೈತರಿಗೆ ಎರಡನೇ ಕಂತಿನ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.</p>.<p><strong>ಪಿಂಚಣಿ ಯೋಜನೆಗೂ ಅಸ್ತು:</strong> ಅಲ್ಲದೆ, ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆಗೂ ಸಂಪುಟ ಸಭೆ ಅನುಮೋದನೆ ನೀಡಿತು. 60 ವರ್ಷ ವಯಸ್ಸು ಮೀರಿದ ಸಣ್ಣ ಮತ್ತು ಅತಿ ಸಣ್ಣ ಕೃಷಿ ಹಿಡುವಳಿದಾರರಿಗೆ ಮಾಸಿಕ ₹ 3000 ಪಿಂಚಣಿ ನೀಡುವುದು ಈ ಯೋಜನೆಯ ಉದ್ದೇಶ.</p>.<p><strong>ವ್ಯಾಪಾರಿಗಳಿಗೆ ಪಿಂಚಣಿ:</strong> 60ವರ್ಷ ವಯಸ್ಸು ಮೀರಿದ ವ್ಯಾಪಾರಿಗಳಿಗೆ ಮಾಸಿಕ ₹ 3,000 ಪಿಂಚಣಿ ಖಾತರಿ ನೀಡುವ ಯೋಜನೆಗೂ ಸಂಪುಟ ಸಮ್ಮತಿ ನೀಡಿದೆ. ಇದರಿಂದ ಸುಮಾರು 3 ಕೋಟಿ ಚಿಲ್ಲರೆ ಮಾರಾಟಗಾರರು ಮತ್ತು ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.</p>.<p>‘ಮೂರು ವರ್ಷಗಳಲ್ಲಿ ಐದು ಕೋಟಿ ವ್ಯಾಪಾರಿಗಳು ಯೋಜನೆ ವ್ಯಾಪ್ತಿಗೆ ಸೇರುವ ನಿರೀಕ್ಷೆಯಿದೆ’ ಎಂದು ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>