ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಚುನಾವಣಾ ಪೂರ್ವದಲ್ಲಿ ಮಂಡಿಸಿದ ಮಧ್ಯಂತರ ಬಜೆಟ್ನಲ್ಲಿ ₹ 75,000 ಕೋಟಿ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಿದ್ಧಿ (ಪಿಎಂಕೆಎಎಸ್ಎಸ್) ಯೋಜನೆಯನ್ನು ಪ್ರಕಟಿಸಿತ್ತು. ವಾರ್ಷಿಕ ₹ 6,000ವನ್ನು ಮೂರು ಕಂತುಗಳಲ್ಲಿ ವಿತರಿಸಲಿದ್ದು, ಎರಡು ಹೆಕ್ಟೇರ್ವರೆಗೆ ಭೂಮಿ ಹೊಂದಿರುವ ಸುಮಾರು 12.5 ಕೋಟಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಇದರ ಲಾಭ ದೊರೆಯಲಿದೆ ಎಂದು ಸರ್ಕಾರ ಹೇಳಿತ್ತು.