ಕುಂಭಮೇಳಕ್ಕೂ ಮುನ್ನ ಹೆಸರು ಬದಲಾವಣೆ ಮಾಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ. ಅಲಹಾಬಾದ್ ಇನ್ನು ಮುಂದೆ ಪ್ರಯಾಗ್ರಾಜ್ ಆಗಲಿದೆ ಎಂಬುದನ್ನು ತಿಳಿಸಲು ಸಂತೋಷಪಡುತ್ತೇನೆ ಎಂದು ಹಿರಿಯ ಸಚಿವ ಸಿದ್ಧಾರ್ಥನಾಥ ಸಿಂಗ್ ತಿಳಿಸಿದರು. ಋಗ್ವೇದ, ಮಹಾಭಾರತ ಮತ್ತು ರಾಮಾಯಣದಲ್ಲೂ ಪ್ರಯಾಗ್ರಾಜ್ ಎಂದೇ ಉಲ್ಲೇಖವಾಗಿದೆ ಎಂದೂ ಅವರು ಹೇಳಿದರು.