ನವದೆಹಲಿ: ತ್ರಿವಳಿ ತಲಾಖ್ ಪದ್ಧತಿ ನಿಷೇಧಿಸಲು ಹೊಸ ಮಸೂದೆ ಮಂಡಿಸುವ ಬಗ್ಗೆ ಬುಧವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಪರಿಶೀಲಿಸುವ ಸಾಧ್ಯತೆ ಇದೆ.
ಸಚಿವ ಸಂಪುಟ ಒಪ್ಪಿದರೆ ಹೊಸ ಮಸೂದೆಯನ್ನು 17ನೇ ಲೋಕಸಭೆಯ ಮೊದಲ ಅಧಿವೇಶನದಲ್ಲೇ ಮಂಡಿಸುವ ನಿರೀಕ್ಷೆ ಇದೆ. ಕಳೆದ ತಿಂಗಳು 16ನೇ ಲೋಕಸಭೆ ವಿಸರ್ಜನೆಗೊಂಡಿದ್ದರಿಂದ ತ್ರಿವಳಿ ತಲಾಖ್ ಕುರಿತಾದ ಮಸೂದೆ ಅವಧಿಯೂ ಮುಗಿದಿತ್ತು.