ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಸಂಪುಟ ಸಭೆ ಕಾಶ್ಮೀರ ಬಗ್ಗೆ ನಿರ್ಧಾರ?

Last Updated 7 ಆಗಸ್ಟ್ 2019, 5:09 IST
ಅಕ್ಷರ ಗಾತ್ರ

ನವದೆಹಲಿ: ಕಾಶ್ಮೀರದ ವಿಚಾರದಲ್ಲಿ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂಬ ವದಂತಿ ದಟ್ಟವಾಗಿರುವಾಗಲೇ ಸೋಮವಾರ ಬೆಳಿಗ್ಗೆ ಸಚಿವ ಸಂಪುಟದ ಸಭೆ ನಿಗದಿಯಾಗಿದೆ.

ಗೃಹ ಸಚಿವ ಅಮಿತ್‌ ಶಾ ಅವರು ಹಿರಿಯ ಅಧಿಕಾರಿಗಳ ಜತೆಗೆಭಾನುವಾರ ಸಭೆ ನಡೆಸಿ ಕಾಶ್ಮೀರದ ಪರಿಸ್ಥಿತಿ ಕುರಿತು ಚರ್ಚೆ ನಡೆಸಿ
ದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೊಭಾಲ್‌, ಗುಪ್ತಚರ ಘಟಕದ (ಐ.ಬಿ) ಮುಖ್ಯಸ್ಥ ಅರವಿಂದ ಕುಮಾರ್‌, ಗೃಹ ಕಾರ್ಯದರ್ಶಿ ರಾಜೀವ್‌ ಗೌಬಾ ಸಭೆಯಲ್ಲಿದ್ದರು. ಈ ಸಭೆಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಅಧಿಕಾರಿಗಳು ಬಹಿರಂಗ ಮಾಡಿಲ್ಲ.

ಸಂಸತ್‌ ಅಧಿವೇಶನದಲ್ಲಿ ಕಾಶ್ಮೀರ ವಿಚಾರ ಚರ್ಚೆಯಾಗುವ ಸಾಧ್ಯತೆ ಇದೆ. ಕಲಾಪ ಆರಂಭವಾಗುವುದಕ್ಕೆ ಮೊದಲೇ ಸಂಪುಟ ಸಭೆ ನಡೆಯಲಿದೆ.

ಅಮರನಾಥ ಯಾತ್ರೆಯನ್ನು ರದ್ದು ಮಾಡಿ, ಪ್ರವಾಸಿಗರೆಲ್ಲರೂ ಕಾಶ್ಮೀರ ಬಿಟ್ಟು ಹೋಗಬೇಕು ಎಂದು ಸರ್ಕಾರ ಕಳೆದ ವಾರ ಆದೇಶ ಕೊಟ್ಟಿದೆ. ಜತೆಗೆ ರಾಜ್ಯದಲ್ಲಿ ಭಾರಿ ಸಂಖ್ಯೆಯಲ್ಲಿ ಯೋಧರನ್ನು ನಿಯೋಜಿಸಲಾಗಿದೆ.

ಕಾಶ್ಮೀರ ನೀತಿಯಲ್ಲಿ ಬದಲಾವಣೆ ಇಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ ಮಲಿಕ್‌ ಸ್ಪಷ್ಟನೆ ನೀಡಿದ್ದಾರೆ.ಆದರೆ,ಕಾಶ್ಮೀರದಲ್ಲಿ ವಿವಿಧ ರೀತಿಯ ವದಂತಿ ಹರಿದಾಡುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅಥವಾ ಶಾ ಅವರು ಮೌನ ಮುರಿದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT