ಬೆಂಗಳೂರು:ನೋಟು ಅಮಾನ್ಯೀಕರಣದ ವೇಳೆ ಆದಾಯ ಇಲಾಖೆ ಅಧಿಕಾರಿಗಳು₹ 8.60 ಕೋಟಿ ಅಕ್ರಮ ಹಣ ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಡಿ.ಕೆ.ಶಿವಕುಮಾರ್ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ದೋಷಾರೋಪ ನಿಗದಿಪಡಿಸಲಿದೆ.
‘ನನ್ನನ್ನು ಪ್ರಕರಣದಿಂದ ಕೈಬಿಡಬೇಕು’ಎಂದು ಕೋರಿದ್ದ ಶಿವಕುಮಾರ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಮಂಗಳವಾರ ಇಲ್ಲಿನ ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ಕ್ಕೆ ಹಾಜರಾಗಿದ್ದರು.
ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಅವರು ಡಿಸೆಂಬರ್ 12ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿದ್ದಾರೆ.