ನವದೆಹಲಿ:ದೆಹಲಿಯಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದರೂ ದೇವಸ್ಥಾನದ ಬಾಗಿಲು ತೆರೆದು ಭಕ್ತಾದಿಗಳನ್ನು ಗುಂಪುಸೇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆಸ್ವಯಂಘೋಷಿತದೇವಮಾನವ ದಾತಿ ಮಹಾರಾಜ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.
ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಉಲ್ಲಂಘನೆ, ಭಾರತೀಯ ದಂಡ ಸಂಹಿತೆ ಪ್ರಕಾರ ಕೃತ್ಯ ಎಸಗಿರುವುದು ಕಂಡು ಬಂದಿದ್ದು ಈ ಸಂಬಂಧಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ದಕ್ಷಿಣ ದೆಹಲಿ ವಿಭಾಗದ ಡಿಸಿಪಿ ಅತುಲ್ ಟಾಕೂರ್ ತಿಳಿಸಿದ್ದಾರೆ.
ದಕ್ಷಿಣ ದೆಹಲಿಯಲ್ಲಿರುವ ಮೆಹೋಲಿಯಲ್ಲಿ ದೇವಸ್ಥಾನದ ಬಾಗಿಲನ್ನು ಶುಕ್ರವಾರ ತೆಗೆದು ಭಕ್ತಾದಿಗಳನ್ನು ಸೇರಿಸಿದ್ದರು ಎಂಬ ವಿಷಯದ ಕುರಿತು ತನಿಖೆ ನಡೆಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಪೊಲೀಸರಿಗೆ ನಿರ್ದೇಶನ ನೀಡಿದ್ದರು.ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
They violated the govt guidelines on lockdown, thereby Daati Maharaj & others were prima facie found to have committed an offence under sections of IPC, Disaster Mgmt Act & Epidemic Diseases Act. A case has been registered & investigation taken up: (DCP) South Delhi, Atul Thakur https://t.co/GFyiCo3JDd