‘ಸರಿಯಾದ ಸಂದರ್ಭದಲ್ಲಿ, ತನಿಖೆಯ ಸೂಕ್ತ ಹಂತದಲ್ಲಿ ಪ್ರಕರಣಗಳು ನ್ಯಾಯಾಲಯದ ಗಮನಕ್ಕೆ ಬರಬೇಕು. ಆಗ ತನಿಖೆ ಸಮರ್ಪಕವಾಗಿ ನಡೆಯುವಂತೆ ಎಚ್ಚರವಹಿಸಬಹುದು. ಕಠುವಾ ಅತ್ಯಾಚಾರ–ಹತ್ಯೆ ಪ್ರಕರಣದ ತನಿಖೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದ್ದರಿಂದಲೇ ತನಿಖೆ ಸಮರ್ಪಕವಾಗಿ ನಡೆಯಿತು. ಆದರೆ ದೇಶದಲ್ಲಿ ದಾಖಲಾಗುವ ಎಲ್ಲಾ ಪ್ರಕರಣಗಳ ತನಿಖೆಯ ಮೇಲ್ವಿಚಾರಣೆಯನ್ನು ನ್ಯಾಯಾಲಯಗಳು ನಡೆಸುವುದು ಸಾಧ್ಯವಿಲ್ಲ’ ಎಂದು ಅವರು ವಿವರಿಸಿದ್ದಾರೆ.